ರಸ್ತೆ ದುರಸ್ತಿ ಕಾಮಗಾರಿ 
ದೇಶ

ರಸ್ತೆಗಳ ದುರಸ್ತಿಗೆ 10 ದಿನಗಳ ಗಡುವು: ಬಿಬಿಎಂಪಿ ಇಂಜಿನಿಯರ್ ಗಳಿಗೆ ಹಗಲು ರಾತ್ರಿ ಕೆಲಸ

ಮುಂದಿನ 10 ದಿನಗಳೊಳಗೆ ನಗರದ ರಸ್ತೆಯಲ್ಲಿರುವ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎಂ. ಮಂಜುನಾಥ್ ಪ್ರಸಾದ್ ಗಡುವು ನೀಡಿರುವ ಬೆನ್ನಲ್ಲೇ ಬಿಬಿಎಂಪಿ ಇಂಜಿನಿಯರ್...

ಬೆಂಗಳೂರು: ಮುಂದಿನ 10 ದಿನಗಳೊಳಗೆ ನಗರದ ರಸ್ತೆಯಲ್ಲಿರುವ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎಂ. ಮಂಜುನಾಥ್ ಪ್ರಸಾದ್ ಗಡುವು ನೀಡಿರುವ ಬೆನ್ನಲ್ಲೇ ಬಿಬಿಎಂಪಿ ಇಂಜಿನಿಯರ್ ಗಳಿಗೆ ನಿದ್ರೆ ಇಲ್ಲದ ರಾತ್ರಿಗಳು ಪ್ರಾರಂಭವಾಗಿವೆ. 
ಹಗಲು ಕಚೇರಿಯ ಕೆಲಸಗಳನ್ನು ಮುಕ್ತಾಯಗೊಳಿಸಿದರೆ ರಾತ್ರಿಯ ವೇಳೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ಮುಂದಿನ 10 ದಿನಗಳೊಳಗೆ ನಗರದ ರಸ್ತೆಯಲ್ಲಿರುವ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎಂ. ಮಂಜುನಾಥ್ ಪ್ರಸಾದ್ ಗಡುವು ವಿಧಿಸಿದ್ದಾರೆ. 
ಮುಖ್ಯ ಇಂಜಿನಿಯರ್ ಗಳು(ಸಿಇ), ಕಾರ್ಯನಿರ್ವಾಹಕ ಇಂಜಿನಿಯರ್(ಇ.ಇ) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ಎ.ಇ.ಇ) ಸಹಾಯಕ ಇಂಜಿನಿಯರ್(ಎ.ಇ) ಹಾಗೂ ಇತರ ಅಧಿಕಾರಿಗಳು ರಸ್ತೆ ಕಾಮಗಾರಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ಬಳ್ಳಾರಿ ರಸ್ತೆಯಲ್ಲಿ ಮಧ್ಯರಾತ್ರಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡಿರುವುದಾಗಿ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಪ್ರಕಾಶ್ ಕೆಎಂ ತಿಳಿಸಿದ್ದಾರೆ. 
ಬಳ್ಳಾರಿ ರಸ್ತೆ ಹೆಚ್ಚು ಜನರು ಸಂಚರಿಸುವ ರಸ್ತೆಯಾಗಿದ್ದು, ಹಗಲು ಟ್ರಾಫಿಕ್ ಹೆಚ್ಚಿರುವುದರಿಂದ ದುರಸ್ತಿ ಕಾಮಗಾರಿ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಶಿವಪ್ರಕಾಶ್ ಮಾಹಿತಿ ನೀದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT