ಸಾಂದರ್ಭಿಕ ಚಿತ್ರ 
ದೇಶ

ತಿರುನೆಲ್ವೆಲಿ: ಆಂಧ್ರ ಪ್ರವಾಸಿಗರ ಮೇಲೆ ಹರಿದ ಸಿಮೆಂಟ್ ಲಾರಿ, ಐವರು ಸಾವು

ಭಾರಿ ವೇಗವಾಗಿ ಚಲಿಸುತ್ತಿದ್ದ ಸಿಮೆಂಟ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶ ಪ್ರವಾಸಿಗರ ಮೇಲೆ ಹರಿದಿದ್ದು,....

ತಿರುನೆಲ್ವೆಲಿ: ಭಾರಿ ವೇಗವಾಗಿ ಚಲಿಸುತ್ತಿದ್ದ ಸಿಮೆಂಟ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶ ಪ್ರವಾಸಿಗರ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಇಂದು ಬೆಳಗಿನ ಜಾವ ತಮಿಳುನಾಡಿನ ತಿರುನೆಲ್ವೆಲಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತ ಪ್ರವಾಸಿಗರು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರದಿಂದ ಕನ್ಯಾಕುಮಾರಿಗೆ ತೆರಳುತ್ತಿದ್ದ ಪ್ರವಾಸಿಗರು ಬ್ರೇಕ್ ಗಾಗಿ ತಮ್ಮ ಬಸ್ ಅನ್ನು ರಸ್ತೆ ಬದಿ ನಿಲ್ಲಿಸಿದ್ದರು. ಈ ವೇಳೆ ವೇಗವಾಗಿ ಬಂದ ಸಿಮೆಂಟ್ ಲಾರಿ ರಸ್ತೆಯಲ್ಲಿದ್ದ ಪ್ರವಾಸಿಗರ ಮೇಲೆ ಹರಿದು ಬಳಿಕ ಬಸ್ ಗೆ ಡಿಕ್ಕಿ ಹೊಡೆದಿದೆ.
ಮೃತರನ್ನು ರತ್ನಾ ಮಾನಿಕ್ಯಂ(56), ನಾಗವರ್ದಿನಿ(45), ವೆಂಕಟ್ ರಾಮರಾವ್(63), ಸತ್ಯಂ(50) ಹಾಗೂ ರಾಮ್ ಮೋಹನ್ ರಾವ್(70) ಎಂದು ಗುರುತಿಸಲಾಗಿದೆ. 
ಈ ಸಂಬಂಧ ತಿರುನೆಲ್ವೆಲಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ನಂತರ ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT