ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ (ಸಂಗ್ರಹ ಚಿತ್ರ)
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 67ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಸ್ವಚ್ಛ ಭಾರತದ ಕನಸನ್ನು ನನಸು ಮಾಡಲು ಪ್ರತೀಯೊಬ್ಬರೂ ಭಾಗಿಯಾಗುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅಮಿತ್ ಶಾ ಅವರು, ದೇಶದಲ್ಲಿರುವ ಪ್ರತಿಯೊಬ್ಬರೂ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸಿ ಅದರ ಫೋಟೋಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೊಬೈಲ್ ಆ್ಯಪ್ ನಲ್ಲಿ ಹಂಚಿಕೊಳ್ಳಬೇಕು ಎಂದು ಹೇಳಿದ್ದಾರೆ.
ಅಲ್ಲದೆ. ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮ ದಿನಾಚರಣೆಯ ಶುಭಾಶಯಗಳನ್ನು ಅಮಿತ್ ಶಾ ಕೋರಿದ್ದಾರೆ.
ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ದಿನವನ್ನು ಆಚರಿಸುತ್ತಿದ್ದು ಈ ಹಿನ್ನಲೆಯಲ್ಲಿ ಬ್ಲಾಗ್ ನಲ್ಲಿ ಬರೆದಿರುವ ಶಾ ಅವರು, ಸಾಕಷ್ಟು ಸಂಘಟನೆಗಳು, ಎನ್ ಜಿಒ, ಪ್ರಮುಖವಾಗಿ ಯುವ ಸಂಘಟನೆಗಳು ಸಾಮಾಜಿಕ ಸೇವೆಗಳು ಜವಾಬ್ದಾರಿಗಳನ್ನು ಹೊತ್ತುಕೊಳ್ಳುತ್ತಿವೆ. ಸೇವೆ ಮಾಡುವುದು ಮೋದಿಯವರ ಜನ್ಮದಿನಾಚರಣೆ ಮಾಡುವುದಕ್ಕೆ ಉತ್ತಮವಾದ ದಾರಿಯಾಗಿದೆ ಎಂದು ಹೇಳಿಕೊಂಡಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿಯವರನ್ನು ಕೊಂಡಾಡಿರುವ ಅವರು, ಜನರು ಮೋದಿಯವರನ್ನು ತಮ್ಮ ಮಗನಂತೆ, ಕುಟುಂಬ ಸದಸ್ಯನಂತೆ ನೋಡುತ್ತಿದ್ದಾರೆ. ಸ್ವಹಿತಾಸಕ್ತಿಯಿಲ್ಲದೆಯೇ ಜನರಿಗಾಗಿ ಹಾಗೂ ದೇಶಕ್ಕಾಗಿ ಗಡಿಯಾರದಂತೆ ಮೋದಿಯವರು ಕೆಲಸ ಮಾಡುತ್ತಿದ್ದಾರೆ. ಬಡತನ ನಿವಾರಣೆ ಮಾಡಲು ಮೋದಿಯವರು ಸಾಕಷ್ಟು ಶ್ರಮ ಪಡುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಬಡತನ ನಿವಾರಣೆಗಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಜನಧನ್ ಯೋಜನೆ ಯಶಸ್ಸು ಕಂಡಿದೆ ಎಂದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos