ಸಾಂದರ್ಭಿಕ ಚಿತ್ರ 
ದೇಶ

ಫೇಸ್'ಬುಕ್ ಗೀಳು: ಸಹೋದರ ಬೈದನೆಂದು ಆತ್ಮಹತ್ಯೆಗೆ ಶರಣಾದ ಯುವತಿ

ಸದಾಕಾಲ ಫೇಸ್'ಬುಕ್ ನಲ್ಲೇ ತೊಡಗಿಕೊಂಡಿರುತ್ತಾಳೆಂದು ಸಹೋದರ ಬೈದಿದ್ದಕ್ಕೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ...

ಕೋಲ್ಕತಾ: ಸದಾಕಾಲ ಫೇಸ್'ಬುಕ್ ನಲ್ಲೇ ತೊಡಗಿಕೊಂಡಿರುತ್ತಾಳೆಂದು ಸಹೋದರ ಬೈದಿದ್ದಕ್ಕೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 
11ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. 24 ಪರಗಣ ಜಿಲ್ಲೆಯ ಮಾನ್ಸಬರಿ ಪ್ರದೇಶದ ನಿವಾಸಿಯಾಗಿರುವ ಯುವತಿ ಶುಕ್ರವಾರ ರಾತ್ರಿ ಮನೆಯಲ್ಲಿನ ರೂಮಿನಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 
ಮೊಬೈಲ್ ಕೈಗೆ ಬಂದಾಗಿನಿಂದಲೂ ಯುವತಿ ದಿನನಿತ್ಯ ಫೇಸ್'ಬುಕ್ ನಲ್ಲೇ ಕಾಲ ಕಳೆಯುತ್ತಿದ್ದಳೂ. ಸರಿಯಾಗಿ ಊಟ ಸೇವಿಸುತ್ತಿರಲಿಲ್ಲ. ಓದವ ಕಡೆಗೂ ಆಸಕ್ತಿಯನ್ನು ಕಳೆದುಕೊಂಡಿದ್ದರು. ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ. ತಂಗಿಯ ಈ ನಡವಳಿಕೆಯನ್ನು ಕಂಡ ಹಿರಿಯ ಸಹೋದರ ಆಕೆಯನ್ನು ಶುಕ್ರವಾರ ಬೆಳಿಗ್ಗೆ ಬೈದಿದ್ದಾನೆ. 
ಸಂಬಂಧಿಕರೊಬ್ಬರನ್ನು ಭೇಟಿಯಾಗಲೆಂದು ಮನೆಯವರು ಆಸ್ಪತ್ರೆಗೆ ಹೋಗಿದ್ದಾರೆ. ಈ ವೇಳೆ ಒಂಟಿಯಾಗಿದ್ದ ಯುವತಿ ತನ್ನ ರೂಮಿನ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. 
ಕುಟುಂಬಸ್ಥರು ಆಸ್ಪತ್ರೆಯಿಂದ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಬಂದಾಗ ಯುವತಿ ಸಾವನ್ನಪ್ಪಿರುವುದು ತಿಳಿದುಬಂದಿತ್ತು ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ. 
ಇನ್ನು ಯುವತಿ ಸಾಯುವುದಕ್ಕೂ ಮುನ್ನ ತನ್ನ ವಾಟ್ಸ್ಅಪ್ ಸ್ಟೇಟಸ್'ನ್ನು 'ಐ ಆ್ಯಮ್ ಡೆಡ್' (ನಾನು ಸತ್ತೆ) ಎಂದು ಬದಲಾಯಿಸಿದ್ದಾಳೆ. ಇದಲ್ಲದೆ, ಫೇಸ್ ಬುಕ್ ನಲ್ಲೂ ಸ್ಟೇಟಸ್ ಹಾಕಿರುವ ಯುವತಿ ನನ್ನ ಜೀವನದ ಎಲ್ಲಾ ವಿಷಯಗಳ ಮೇಲೆ ನಾನು ಆಸಕ್ತಿ ಕಳೆದುಕೊಂಡಿದ್ದೇನೆಂದು ಬರೆದುಕೊಂಡಿದ್ದಾಳೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪಶ್ಚಿಮ ಬಂಗಾಳದ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT