ಎಎಫ್ ಮಾರ್ಷಲ್ ಅರ್ಜನ್ ಸಿಂಗ್ ಹಾಗೂ ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ದೇಶ

ಐಎಎಫ್ ಮಾರ್ಷಲ್ ಅರ್ಜನ್ ಸಿಂಗ್ ನಿಧನಕ್ಕೆ ಗಣ್ಯರ ಸಂತಾಪ!

ಹೃದಯಾಘಾತಕ್ಕೆ ಒಳಗಾಗಿ ಶನಿವಾರ ನಿಧನರಾದ ಐಎಎಫ್ ಮಾರ್ಷಲ್ ಅರ್ಜನ್ ಸಿಂಗ್ ಅವರಿಗೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಹೃದಯಾಘಾತಕ್ಕೆ ಒಳಗಾಗಿ ಶನಿವಾರ ನಿಧನರಾದ ಐಎಎಫ್ ಮಾರ್ಷಲ್ ಅರ್ಜನ್ ಸಿಂಗ್ ಅವರಿಗೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವಿಟರ್ ನಲ್ಲಿ ಅರ್ಜನ್ ಸಿಂಗ್ ಸೇವೆಯನ್ನು ಸ್ಮರಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಅರ್ಜನ್ ಸಿಂಗ್ ವಾಯುಪಡೆಯ ಮಹಾನ್ ಯೋಧರಾಗಿದ್ದರು. ಅವರ ಸಾವಿನಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.  ದೇವರು ಅವರ ಆತ್ಮಕ್ಕೆ ನೀಡಲಿ ಹಾಗೂ ಅವರ ಕುಟುಂಬಕ್ಕೆ ಸಾವಿನ ನೋವನ್ನು ತಡೆಯು ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, ಭಾರತ ಎಂದಿಗೂ ಎಎಫ್ ಮಾರ್ಷಲ್ ಅರ್ಜನ್ ಸಿಂಗ್ ಅವರ ಸೇವೆಯನ್ನು ಮರೆಯುವುದಿಲ್ಲ. 1965ರ ಯುದ್ಧದಲ್ಲಿ ಅವರ ನಾಯಕತ್ವ ನಿರ್ಣಾಯಕವಾಗಿತ್ತು. ಅವರ ಸಾವಿನಿಂದ  ದೇಶಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಇನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿ, ದೇಶ ಮಹಾನ್ ಯೋಧನನ್ನು ಕಳೆದುಕೊಂಡಿದ್ದು, ಇದು ತುಂಬಲಾರದ ನಷ್ಟ. ಸಾಕಷ್ಟು ಯುದ್ಧಗಳಲ್ಲಿ ಅವರ ಪಾಲ್ಗೊಂಡಿದ್ದರು.  ಅವರ ಶಿಸ್ತು ಹಾಗೂ ಅವರ ಗುಣಗಳು ಇಂದಿನ ಪೀಳಿಗೆಯ ಯೋಧರಿಗೆ ಸ್ಪೂರ್ತಿಯಾಗಿದ್ದು, ಮುಂದಿನ ಪೀಳಿಗೆಯ ಯೋಧರಿಗೂ ಅರ್ಜನ್ ಸಿಂಗ್ ಮಾದರಿಯಾಗಲಿದ್ದಾರೆ. ಸರ್ಕಾರದ ವತಿಯಿಂದ ಅವರ ಸಿಗಬೇಕಿರುವ ಎಲ್ಲ  ಗೌರವಗಳನ್ನು ಸಂಪೂರ್ಣವಾಗಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

98 ವರ್ಷದ ಅರ್ಜನ್ ಸಿಂಗ್ ಅವರು ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಭಾರತ ಮೇಲುಗೈ ಸಾಧಿಸಲು ಅರ್ಜನ್ ಸಿಂಗ್ ನೇತೃತ್ವದ ಭಾರತೀಯ ವಾಯುಪಡೆ  ಕಾರಣವಾಗಿತ್ತು. ಅಂದಿನ ಕದನದಲ್ಲಿ ಅರ್ಜನ್ ಸಿಂಗ್ ನಿರ್ಣಾಯಕ ಪಾತ್ರವಹಿಸಿ ಭಾರತ ಮೇಲುಗೈ ಸಾಧಿಸಲು ನೆರವಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT