ಸಾಂದರ್ಭಿಕ ಚಿತ್ರ 
ದೇಶ

ಬಿಎಸ್'ಪಿ ನಾಯಕ ಹತ್ಯೆ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಮಚೇಂದ್ರ ನಾಥ್ ಬಂಧನ

2013ರಲ್ಲಿ ನಡೆದ ಬಿಎಸ್'ಪಿ ನಾಯಕ ದೀಪಕ್ ಭಾರಧ್ವಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವರೊಬ್ಬರನ್ನು ಭಾನುವಾರ ಬಂಧನಕ್ಕೊಳಪಡಿಸಲಾಗಿದೆ...

ಘಾಜಿಯಾಬಾದ್: 2013ರಲ್ಲಿ ನಡೆದ ಬಿಎಸ್'ಪಿ ನಾಯಕ ದೀಪಕ್ ಭಾರದ್ವಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವರೊಬ್ಬರನ್ನು ಭಾನುವಾರ ಬಂಧನಕ್ಕೊಳಪಡಿಸಲಾಗಿದೆ. 
ಮಚೇಂದ್ರ ನಾಥ್ ಅಲಿಯಾಸ್ ಪ್ರತಿಭಾ ನಂದ್ ಬಂಧಿತನಕ್ಕೊಳಗಾಗಿರುವ ಸ್ವಯಂ ಘೋಷಿತ ದೇವಮಾನವರಾಗಿದ್ದಾರೆ. ಜಮೀನಿನ ವ್ಯಾಜ್ಯ ಸಂಬಂಧ ಸ್ವಾಮೀಜಿ ಹಾಗೂ ದೀಪಕ್ ಭಾರದ್ವಾಜ್ ನಡುವೆ ಜಟಾಪಟಿ ನಡೆದಿತ್ತು. ಈ ವಿಚಾರವಾಗಿ ದೀಪಕ್ ಭಾರದ್ವಾಜ್ ಕೊಲೆಗೆ ಸ್ವಾಮೀಜಿ ಸುಪಾರಿ ನೀಡಿದ್ದಾರೆಂಬ ಆರೋಪಗಳು ಕೇಳಿಬಂದಿತ್ತು. 
ದೀಪಕ್ ಭಾರದ್ವಾಜ್ ಹತ್ಯೆಯಾದ ಬಳಿಕ ಸ್ವಾಮೀಜಿ ನಾಪತ್ತೆಯಾಗಿದ್ದರು. ಬಳಿಕ ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ತನಿಖೆ ವೇಳೆ ವಿದೇಶಿ ನಿರ್ಮಿತ ಪಿಸ್ತೂಲ್ ನ್ನು ಸ್ವಾಮೀಜಿಯವರ ಆಶ್ರಮದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. 
ಬಹುಜನ ಸಮಾಜ ಪಕ್ಷದ ನಾಯಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದೀಪಕ್ ಭಾರದ್ವಾಜ್ ಅವರನ್ನು ಇತ್ತೀಚೆಗಷ್ಟೇ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT