ಸಾಂದರ್ಭಿಕ ಚಿತ್ರ 
ದೇಶ

ಬಿಎಸ್'ಪಿ ನಾಯಕ ಹತ್ಯೆ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಮಚೇಂದ್ರ ನಾಥ್ ಬಂಧನ

2013ರಲ್ಲಿ ನಡೆದ ಬಿಎಸ್'ಪಿ ನಾಯಕ ದೀಪಕ್ ಭಾರಧ್ವಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವರೊಬ್ಬರನ್ನು ಭಾನುವಾರ ಬಂಧನಕ್ಕೊಳಪಡಿಸಲಾಗಿದೆ...

ಘಾಜಿಯಾಬಾದ್: 2013ರಲ್ಲಿ ನಡೆದ ಬಿಎಸ್'ಪಿ ನಾಯಕ ದೀಪಕ್ ಭಾರದ್ವಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವರೊಬ್ಬರನ್ನು ಭಾನುವಾರ ಬಂಧನಕ್ಕೊಳಪಡಿಸಲಾಗಿದೆ. 
ಮಚೇಂದ್ರ ನಾಥ್ ಅಲಿಯಾಸ್ ಪ್ರತಿಭಾ ನಂದ್ ಬಂಧಿತನಕ್ಕೊಳಗಾಗಿರುವ ಸ್ವಯಂ ಘೋಷಿತ ದೇವಮಾನವರಾಗಿದ್ದಾರೆ. ಜಮೀನಿನ ವ್ಯಾಜ್ಯ ಸಂಬಂಧ ಸ್ವಾಮೀಜಿ ಹಾಗೂ ದೀಪಕ್ ಭಾರದ್ವಾಜ್ ನಡುವೆ ಜಟಾಪಟಿ ನಡೆದಿತ್ತು. ಈ ವಿಚಾರವಾಗಿ ದೀಪಕ್ ಭಾರದ್ವಾಜ್ ಕೊಲೆಗೆ ಸ್ವಾಮೀಜಿ ಸುಪಾರಿ ನೀಡಿದ್ದಾರೆಂಬ ಆರೋಪಗಳು ಕೇಳಿಬಂದಿತ್ತು. 
ದೀಪಕ್ ಭಾರದ್ವಾಜ್ ಹತ್ಯೆಯಾದ ಬಳಿಕ ಸ್ವಾಮೀಜಿ ನಾಪತ್ತೆಯಾಗಿದ್ದರು. ಬಳಿಕ ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ತನಿಖೆ ವೇಳೆ ವಿದೇಶಿ ನಿರ್ಮಿತ ಪಿಸ್ತೂಲ್ ನ್ನು ಸ್ವಾಮೀಜಿಯವರ ಆಶ್ರಮದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. 
ಬಹುಜನ ಸಮಾಜ ಪಕ್ಷದ ನಾಯಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದೀಪಕ್ ಭಾರದ್ವಾಜ್ ಅವರನ್ನು ಇತ್ತೀಚೆಗಷ್ಟೇ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT