ಸಾಂದರ್ಭಿಕ ಚಿತ್ರ 
ದೇಶ

ವಿಜಯವಾಡ: ಫೇಸ್ ಬುಕ್ ಫ್ರೆಂಡ್ ನಿಂದ 4.88 ಲಕ್ಷ ರೂ. ಕಳೆದುಕೊಂಡ ವೈದ್ಯರು!

ಪೊಲೀಸರ ಎಚ್ಚರಿಕೆ ಸಂದೇಶಗಳಿಗೆ ಕಿವಿಗೊಡದೆ ಆನ್ ಲೈನ್ ನಲ್ಲಿ ಸ್ನೇಹ ಮಾಡಲು ಹೋಗಿ ವೈದ್ಯರೊಬ್ಬರು...

ವಿಜಯವಾಡ: ಪೊಲೀಸರ ಎಚ್ಚರಿಕೆ ಸಂದೇಶಗಳಿಗೆ ಕಿವಿಗೊಡದೆ ಆನ್ ಲೈನ್ ನಲ್ಲಿ ಸ್ನೇಹ ಮಾಡಲು ಹೋಗಿ ವೈದ್ಯರೊಬ್ಬರು 4.88 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ವಿಜಯವಾಡದಲ್ಲಿ ನಡೆದಿದೆ. ಅಪರಿಚಿತನ ಸ್ನೇಹ ವೈದ್ಯರಿಗೆ ಕೇವಲ ಮೂರು ವಾರಗಳ ಹಿಂದೆಯಷ್ಟೇ ಆಗಿತ್ತು.
ಇದಕ್ಕೂ ಮುನ್ನ ಶಿಕ್ಷಕಿಯೊಬ್ಬರು ಆನ್ ಲೈನ್ ಸ್ನೇಹದಿಂದ 8.52 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಪಟಮಾಟ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಐಟಿ ಕಾಯ್ದೆ 66(ಬಿ)ಯಡಿ ಸೆಕ್ಷನ್ 415, 420ರಡಿಯಲ್ಲಿ ಕೇಸು ದಾಖಲಾಗಿದ್ದು ತನಿಖೆ ಸದ್ಯದಲ್ಲಿಯೇ ನಡೆಯಲಿದೆ.
ಕಳೆದ ಮೂರು ವರ್ಷಗಳಿಂದ ಸರ್ಜನ್ ಆಗಿ ಕೆಲಸ ಮಾಡುತ್ತಿರುವ ವೈದ್ಯರು ಅಯ್ಯಪ್ಪ ನಗರ ನಿವಾಸಿ. ಅವರಿಗೆ ವೆರೊನಿಕಾ ಆಡಮ್ಸ್ ಎಂಬ ಮಹಿಳೆಯಿಂದ ಆನ್ ಲೈ ನ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಆಕೆ ಲಂಡನ್ ನಲ್ಲಿ ಉದ್ಯಮಿ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾಳೆ. ಶನಿವಾರ ಭಾರತಕ್ಕೆ ಸಭೆಯೊಂದರಲ್ಲಿ ಭಾಗವಹಿಸಲು ಬರುವುದಾಗಿ ಹೇಳಿದ್ದಳು. ಅಲ್ಲದೆ ವಿಜಯವಾಡಕ್ಕೆ ಬಂದು ವೈದ್ಯರನ್ನು ಭೇಟಿ ಮಾಡಲು ಆಸಕ್ತಿ ತೋರಿದ್ದಳು.
ಎರಡು ದಿನಗಳು ಕಳೆದ ನಂತರ ವೆರೊನಿಕಾ ವೈದ್ಯರಿಗೆ ಫೇಸ್ ಬುಕ್ ನಲ್ಲಿ ಸಂದೇಶ ಕಳುಹಿಸಿ ತಾನು ದೆಹಲಿ ವಿಮಾನ ನಿಲ್ದಾಣದಲ್ಲಿದ್ದು ಸುಂಕ ಅಧಿಕಾರಿಗಳ ಬಂಧನದಲ್ಲಿದ್ದೇನೆ ಎಂದಿದ್ದಳು. ತನ್ನ ಬಳಿಯಿರುವ ಎಲ್ಲಾ ಹಣವನ್ನು ಕಸ್ಟಮ್ಸ್ ಅಧಿಕಾರಿಗಳು ತೆಗೆದುಕೊಂಡಿರುವುದರಿಂದ ಹಣದ ಅವಶ್ಯಕತೆಯಿದ್ದು, ತಕ್ಷಣವೇ ಹಣ ಕಳುಹಿಸುವಂತೆ ಕೋರಿದ್ದಳು. ಮತ್ತೊಬ್ಬರು ಕಸ್ಟಮ್ಸ್ ಅಧಿಕಾರಿಯೆಂದು ಹೇಳಿಕೊಂಡು ವೈದ್ಯರ ಬಳಿ ಫೋನ್ ನಲ್ಲಿ ಮಾತನಾಡಿ ವೆರೊನಿಕಾ ಹೆಸರಿನಲ್ಲಿ 5 ಲಕ್ಷ ರೂಪಾಯಿ ಬ್ಯಾಂಕಿಗೆ ಠೇವಣಿಯಿಡುವಂತೆ ಹೇಳಿದ್ದರು.
ಗಾಬರಿಗೊಂಡ ವೈದ್ಯರು ತಕ್ಷಣವೇ ವೆರೊನಿಕಾ ಹೆಸರಿನಲ್ಲಿ 4.88 ಲಕ್ಷ ರೂಪಾಯಿ ಠೇವಣಿಯಿರಿಸಿದ್ದಾರೆ. ತಮ್ಮ ಬಳಿಯಿದ್ದ ಹಣವನ್ನೆಲ್ಲಾ ಠೇವಣಿಯಿಟ್ಟು ಆ ಸಂಖ್ಯೆಗೆ ವೈದ್ಯರು ಕರೆ ಮಾಡಿದರೆ ಸ್ವಿಚ್ ಆಫ್ ಬಂತು. ಆಗ ಅವರಿಗೆ ತಾವು ಮೋಸ ಹೋಗಿರುವುದು ಗೊತ್ತಾಯಿತು ಎಂದು ಪೊಲೀಸರು ಹೇಳುತ್ತಾರೆ.
ಸೈಬರ್ ಅಪರಾಧ ವಿಭಾಗ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT