ಬರ ಪೀಡಿತ ರೈತರ ಸಂಕಷ್ಟ 
ದೇಶ

ರಾಯಲಸೀಮಾ: ಬರ ಪೀಡಿತ ರೈತರಿಂದ ಪ್ರಧಾನಿ ಮೋದಿಗೆ 68 ಪೈಸೆಯ 400 ಚೆಕ್!

ಬರ ಪೀಡಿತ ರಾಯಲಸೀಮ ಪ್ರಾಂತ್ಯದ ರೈತರು ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಹುಟ್ಟುಹಬ್ಬದ ವಿಶೇಷ ಉಡುಗೊರೆಯಾಗಿ 68 ಪೈಸೆಗಳ 400 ಚೆಕ್...

ಹೈದರಾಬಾದ್: ಬರ ಪೀಡಿತ ರಾಯಲಸೀಮ ಪ್ರಾಂತ್ಯದ ರೈತರು ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಹುಟ್ಟುಹಬ್ಬದ ವಿಶೇಷ ಉಡುಗೊರೆಯಾಗಿ 68 ಪೈಸೆಗಳ 400 ಚೆಕ್ ಗಳನ್ನು ಕಳುಹಿಸಿದ್ದಾರೆ.
ರಾಯಲಸೀಮೆ ಪ್ರಾಂತ್ಯದ ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ರಾಯಲಸೀಮಾ ಸಗುಣೀತಿ ಸಾಧನಾ ಸಮಿತಿ(ಆರ್ಎಸ್ಎಸ್ಎಸ್) ಎಂಬ ಸರ್ಕಾರೇತರ ಸೇವಾ ಸಂಘಟನೆಯು ರೈತರ ಪರವಾಗಿ ಪ್ರಧಾನಿ ಮೋದಿ ಅವರಿಗೆ ತಲಾ 68 ಪೈಸೆಗಳ 400 ಚೆಕ್ ಗಳನ್ನು ಕಳುಹಿಸಿಕೊಟ್ಟಿದ್ದು ನಿಮ್ಮ ಹುಟ್ಟುಹಬ್ಬಕ್ಕೆ ನಮ್ಮಿಂದ ಕೊಡಲು ಸಾಧ್ಯವಿರುವ ಗರಿಷ್ಠ ಉಡುಗೊರೆಯಾಗಿದೆ ಎಂದು ರೈತರು ಹೇಳಿದ್ದಾರೆ. 
ರಾಯಲಸೀಮೆ ಪ್ರಾಂತ್ಯದ ನಾಲ್ಕು ಜಿಲ್ಲೆಗಳಾದ ಕಡಪ, ಅನಂತಪುರ, ಕರ್ನೂಲ್ ಮತ್ತು ಚಿತ್ತೂರು ಬರ ತಾಂಡವವಾಡುತ್ತಿದೆ. ಇಲ್ಲಿನ ರೈತಾಪಿ ಜನರ ದಯನೀಯ ಪರಿಸ್ಥಿತಿಯನ್ನು ಪ್ರಧಾನಿಗೆ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಮನವರಿಕೆ ಮಾಡಿಕೊಡುವುದಕ್ಕೆ ಈ ರೀತಿ ಮಾಡಿರುವುದಾಗಿ ಸಂಘಟನೆ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT