ನವದೆಹಲಿ: ಜೆಡಿಯು ಶರದ್ ಯಾದವ್ ಬಣಕ್ಕೆ ಗುಜರಾತ್ ನ ಶಾಸಕ ಚೋಟುಭಾಯ್ ವಸಾವ ಅವರನ್ನು ಹಂಗಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಚೋಟು ಭಾಯ್ ವಸಾವ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಅರುಣ್ ಕುಮಾರ್ ಶ್ರೀವಾಸ್ತವ ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ಜೆಡಿಯು ಉಪಾಧ್ಯಕ್ಷ ಕೆ ರಾಜಶೇಖರನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ನಿರ್ಧಾರಗಳನ್ನು ಅಸಿಂಧುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಅಕ್ಟೋಬರ್ 8 ರಂದು ಪಕ್ಷದ ರಾಷ್ಟ್ರೀಯ ಸಭೆ ನಡೆಯಲಿದ್ದು, ಯಾವ ಬಣ ನೈಜ ಜೆಡಿಯುಯದ್ದಾಗಿದೆ ಎಂಬುದನ್ನು ಸ್ಪಷ್ಟಪಡಿಸಲಾಗುತ್ತದೆ ಎಂದು ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.