ಸುಪ್ರೀಂಕೋರ್ಟ್ 
ದೇಶ

ರೊಹಿಂಗ್ಯಾ ನಿರಾಶ್ರಿತರಿಂದ ದೇಶದ ಭದ್ರತೆಗೆ ಅಪಾಯವಿದೆ: ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ

ರೊಹಿಂಗ್ಯಾ ಮುಸ್ಲಿಮರ ಗಡಿಪಾರು ಪ್ರಕರಣ ಕುರಿತಂತೆ ಸುಪ್ರೀಂಕೋರ್ಟ್'ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ರೊಹಿಂಗ್ಯಾ ನಿರಾಶ್ರಿತರಿಂದ ದೇಶದ ಭದ್ರತೆಗೆ ಗಂಭೀರ ಅಪಾಯವಿದೆ ಎಂದು ಸೋಮವಾರ ಹೇಳಿದೆ...

ನವದೆಹಲಿ: ರೊಹಿಂಗ್ಯಾ ಮುಸ್ಲಿಮರ ಗಡಿಪಾರು ಪ್ರಕರಣ ಕುರಿತಂತೆ ಸುಪ್ರೀಂಕೋರ್ಟ್'ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ರೊಹಿಂಗ್ಯಾ ನಿರಾಶ್ರಿತರಿಂದ ದೇಶದ ಭದ್ರತೆಗೆ ಗಂಭೀರ ಅಪಾಯವಿದೆ ಎಂದು ಸೋಮವಾರ ಹೇಳಿದೆ. 
ರೊಹಿಂಗ್ಯಾ ನಿರಾಶ್ರಿತರಿಂದ ದೇಶದ ಭದ್ರತೆಗೆ ಗಂಭೀರವಾದ ಅಪಾಯವಿದ್ದು, ಈ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಲು ಕಾಲಾವಕಾಶ ಬೇಕಿದೆ ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ತಿಳಿಸಿದೆ. 
ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ 15 ಪುಟಗಳ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, ರೊಹಿಂಗ್ಯಾ ಮುಸ್ಲಿಮರು ಪಾಕಿಸ್ತಾನ ಮೂಲದ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅ್ಯಂಡ್ ಇರಾನ್ (ಇಸಿಸ್) ಉಗ್ರ ಸಂಘಟನೆಯೊಂದಿಗೆ  ನಂಟು ಹೊಂದಿದೆ. 
ಮ್ಯಾನ್ಮಾರ್, ಪಶ್ಚಿಮ ಬಂಗಾಳ, ತ್ರಿಪುರ ಗಳಲ್ಲಿ ರೊಹಿಂಗ್ಯಾ ವಲಸಿಗರು ತಮ್ಮ ಅಕ್ರಮ ಚಟುವಟಿಕೆಗಳನ್ನು ನಡೆಸಲು ಅನುಕೂಲಕರವಾಗಲೆಂದು ಸಂಘಟಿತ ಸಂಪರ್ಕಗಳು ಕಾರ್ಯನಿರ್ವಹಿಸುತ್ತಿವೆ. ಈ ಬಗ್ಗೆ ವಿವರಣಾತ್ಮಕವಾಗಿ ಪ್ರತಿಕ್ರಿಯೆ ನೀಡಲು ಅ.3 ರವರೆಗೂ ಸರ್ಕಾರಕ್ಕೆ ಕಾಲಾವಕಾಶದ ಅಗತ್ಯವಿದೆ ಎಂದು ಸುಪ್ರೀಂ ಬಳಿ ಕೇಂದ್ರ ಮನವಿ ಮಾಡಿಕೊಂಡಿದೆ. 
ಮ್ಯಾನ್ಮಾರ್ ನಲ್ಲಿ ರೊಹಿಂಗ್ಯಾ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಶ್ವದಾದ್ಯಂತ ಖಂಡನೆಗಳು ವ್ಯಕ್ತವಾಗತೊಡಗಿವೆ. 
ಈ ಹಿಂದೆ ರೊಹಿಂಗ್ಯಾ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗದ ಮುಖ್ಯಸ್ಥ ಝೀದ್ ರಹದ್ ಅಲ್ ಹುಸೇನ್ ಅವರು, ಭಾರತದಲ್ಲಿರುವ ರೊಹಿಂಗ್ಯಾ ಮುಸ್ಲಿಮರನ್ನು ಸಾಮೂಹಿಕ ಬಹಿಷ್ಕಾರ ಹಾಕುವ ಕುರಿತು ಮಾತುಗಳು ಕೇಳಿಬರುತ್ತಿವೆ. ಆದರೆ ಭಾರತವು ಸಾಮೂಹಿಕ ಬಹಿಷ್ಕಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ, ಅಥವಾ ಜನರು ಚಿತ್ರಹಿಂಸೆ ಅಥವಾ ಇತರ ಗಂಭೀರ ಉಲ್ಲಂಘನೆಗಳನ್ನು ಎದುರಿಸುವ ಸ್ಥಳಕ್ಕೆ ಮರಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT