ಲಲಿತ್ ಮಹಲ್ ಪ್ಯಾಲೇಸ್ 
ದೇಶ

ಹೋಟೆಲ್ ಲಲಿತ್ ಮಹಲ್ ಅನ್ನು ಕರ್ನಾಟಕ ಸರ್ಕಾರದ ಸುಪರ್ದಿಗೆ ಒಪ್ಪಿಸಲು ಕೇಂದ್ರ ತೀರ್ಮಾನ

ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ವದೆಹಲಿ: ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ  ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
1931ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಿರ್ಮಿಸಿದ ಈ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿರ್ವಹಣೆ ಮಾಡುತ್ತಿದ್ದವು. ಈಗ ಸಂಪೂರ್ಣವಾಗಿ ರಾಜ್ಯ ಸರ್ಕಾರಕ್ಕೆ ಹೋಟೇಲನ್ನು ಹಸ್ತಾಂತರಿಸಲಾಗುತ್ತದೆ ಎಂದು ಜೇಟ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದರ ಜತೆಗೆ ಐಟಿಡಿಸಿ ಆಡಳಿತದಲ್ಲಿದ್ದ ಹೋಟೆಲ್ ಜೈಪುರ್ ಅಶೋಕ್ ನ್ನು ರಾಜಸ್ಥಾನ ಸರಕಾರಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಈ ದಿನದ  ಸಂಪುಟ ಸಭೆಯ ಇತರೆ ತೀರ್ಮಾನಗಳು:
ಕೇಂದ್ರ ರೈಲ್ವೇ ನೌಕರರಿಗೆ ದಸರಾ ಉಡುಗೊರೆಯಾಗಿ ಬೋನಸ್ ಘೋಷಣೆ.
ಜಮ್ಮು ಕಾಶ್ಮೀರದ ವಿಶೇಷ ಕೈಗಾರಿಗೆ ಉತ್ತೇಜನ ಯೋಜನೆಗೆ ಅನುಮೋದನೆ.
ಉಡಾನ್ ಯೋಜನೆಯ ಅವಧಿ ಡಿ. 31ರವೆರೆಗೆ ವಿಸ್ತರಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT