ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ವಶಕ್ಕೆ ಪಡೆದ ಪೊಲೀಸರು
ಥಾಣೆ: ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ಇಕ್ಬಾಲ್ ಜೊತೆಗೆ ಆತನ ಇಬ್ಬರು ಸಹಚರರಿಗೂ 8 ದಿನಗಳ ಕಾಲ ಪೊಲೀಸರು ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಥಾಣೆಯಲ್ಲಿನ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸ್ ಅಧಿಕಾರಿಗಳು ದಕ್ಷಿಣ ಮುಂಬೈನ ನಾಗ್ಪದದಲ್ಲಿನ ಕಸ್ಕರ್'ನ ನಿವಾಸದ ಮೇಲೆ ನಿನ್ನೆ ದಾಳಿ ನಡೆಸಿದ್ದರು. ಈ ವೇಳೆ ದಾವೂದ್ ಸಹೋದನನ್ನು ಬಂಧನಕ್ಕೊಳಪಡಿಸಿದ್ದರು.
ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಪೊಲೀಸರು, ಕಸ್ಕರ್ ನನ್ನು ವಿಚಾರಣೆ ನಡೆಸವ ಅಗತ್ಯವಿದ್ದು, ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿತ್ತು. ಇದರಂತೆ ನ್ಯಾಯಾಲಯದ ಕಸ್ಕರ್ ಹಾಗೂ ಆತನ ಇಬ್ಬರು ಸಹಚರರನ್ನು 8 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos