ದೇಶ

ಹಣ ಸುಲಿಗೆ ಪ್ರಕರಣ: ದಾವೂದ್ ಸಹೋದರ, ಇಬ್ಬರು ಸಹಚರರು 8 ದಿನ ಪೊಲೀಸ್ ವಶಕ್ಕೆ

Manjula VN
ಥಾಣೆ: ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. 
ಇಕ್ಬಾಲ್ ಜೊತೆಗೆ ಆತನ ಇಬ್ಬರು ಸಹಚರರಿಗೂ 8 ದಿನಗಳ ಕಾಲ ಪೊಲೀಸರು ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ. 
ಥಾಣೆಯಲ್ಲಿನ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸ್ ಅಧಿಕಾರಿಗಳು ದಕ್ಷಿಣ ಮುಂಬೈನ ನಾಗ್ಪದದಲ್ಲಿನ ಕಸ್ಕರ್'ನ ನಿವಾಸದ ಮೇಲೆ ನಿನ್ನೆ ದಾಳಿ ನಡೆಸಿದ್ದರು. ಈ ವೇಳೆ ದಾವೂದ್ ಸಹೋದನನ್ನು ಬಂಧನಕ್ಕೊಳಪಡಿಸಿದ್ದರು. 
ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಪೊಲೀಸರು, ಕಸ್ಕರ್ ನನ್ನು ವಿಚಾರಣೆ ನಡೆಸವ ಅಗತ್ಯವಿದ್ದು, ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿತ್ತು. ಇದರಂತೆ ನ್ಯಾಯಾಲಯದ ಕಸ್ಕರ್ ಹಾಗೂ ಆತನ ಇಬ್ಬರು ಸಹಚರರನ್ನು 8 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. 
SCROLL FOR NEXT