ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ವಶಕ್ಕೆ ಪಡೆದ ಪೊಲೀಸರು 
ದೇಶ

ಹಣ ಸುಲಿಗೆ ಪ್ರಕರಣ: ದಾವೂದ್ ಸಹೋದರ, ಇಬ್ಬರು ಸಹಚರರು 8 ದಿನ ಪೊಲೀಸ್ ವಶಕ್ಕೆ

ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ಪೊಲೀಸರು...

ಥಾಣೆ: ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. 
ಇಕ್ಬಾಲ್ ಜೊತೆಗೆ ಆತನ ಇಬ್ಬರು ಸಹಚರರಿಗೂ 8 ದಿನಗಳ ಕಾಲ ಪೊಲೀಸರು ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ. 
ಥಾಣೆಯಲ್ಲಿನ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸ್ ಅಧಿಕಾರಿಗಳು ದಕ್ಷಿಣ ಮುಂಬೈನ ನಾಗ್ಪದದಲ್ಲಿನ ಕಸ್ಕರ್'ನ ನಿವಾಸದ ಮೇಲೆ ನಿನ್ನೆ ದಾಳಿ ನಡೆಸಿದ್ದರು. ಈ ವೇಳೆ ದಾವೂದ್ ಸಹೋದನನ್ನು ಬಂಧನಕ್ಕೊಳಪಡಿಸಿದ್ದರು. 
ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಪೊಲೀಸರು, ಕಸ್ಕರ್ ನನ್ನು ವಿಚಾರಣೆ ನಡೆಸವ ಅಗತ್ಯವಿದ್ದು, ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿತ್ತು. ಇದರಂತೆ ನ್ಯಾಯಾಲಯದ ಕಸ್ಕರ್ ಹಾಗೂ ಆತನ ಇಬ್ಬರು ಸಹಚರರನ್ನು 8 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT