ಟಿಟಿವಿ ದಿನಕರನ್ ಬಳಗ 
ದೇಶ

ತಮಿಳುನಾಡು: ಬಹುಮತ ಸಾಬೀತಿಗೆ ತಡೆ ಆದೇಶ ವಿಸ್ತರಣೆ; ಶಾಸಕರ ಅಮಾನತು ಅರ್ಜಿ ವಿಚಾರಣೆ ಅ.4ಕ್ಕೆ

ಮದ್ರಾಸ್ ಹೈಕೋರ್ಟ್ ತಮಿಳುನಾಡು ವಿಧಾನಸಭೆ ಬಹುಮತ ಸಾಬೀತಿಗೆ ತಡೆ ಆದೇಶವನ್ನು ವಿಸ್ತರಣೆ ಮಾಡಿದ್ದು ಇದೇ ವೇಳೆ 18 ಎಐಎಡಿಎಂಕೆ ಶಾಸಕರ ಅಮಾನತು...

ಚೆನ್ನೈ: ಮದ್ರಾಸ್ ಹೈಕೋರ್ಟ್ ತಮಿಳುನಾಡು ವಿಧಾನಸಭೆ ಬಹುಮತ ಸಾಬೀತಿಗೆ ತಡೆ ಆದೇಶವನ್ನು ವಿಸ್ತರಣೆ ಮಾಡಿದ್ದು ಇದೇ ವೇಳೆ 18 ಎಐಎಡಿಎಂಕೆ ಶಾಸಕರ ಅಮಾನತು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದ್ದು ಟಿಟಿವಿ ದಿನಕರನ್ ಬಳಗಕ್ಕೆ ತೀವ್ರ ಹಿನ್ನೆಡೆಯಾಗಿದೆ.
ಮುಂದಿನ ಆದೇಶದವರೆಗೆ ತಮಿಳುನಾಡಿನಲ್ಲಿ ವಿಶ್ವಾಸಮತ ಯಾಚನೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ. 
ತಮಿಳುನಾಡು ರಾಜಕೀಯ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಪಳನಿ ಸ್ವಾಮಿ ಸರ್ಕಾರದ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಹಾಗೂ ಕಲಾಪಕ್ಕೆ ಅಡ್ಡಿ ಪಡಿಸುವ ಬೆದರಿಕೆಯೊಡ್ಡುತ್ತಿದ್ದ ಟಿಟಿವಿ ದಿನಕರನ್ ಬೆಂಬಲಿತ 18 ಮಂದಿ ಶಾಸಕರನ್ನು ತಮಿಳುನಾಡು ವಿಧಾನಸಭೆ ಸ್ಪೀಕರ್ ಧನಪಾಲ್ ಅವರು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. 
ಈ ಆದೇಶವನ್ನು ಪ್ರಶ್ನಿಸಿ ಎಐಎಡಿಎಂಕೆಯ 8 ಶಾಸಕರಾದ ಪಿ ವೆಟ್ರಿವೇಲ್, ಎನ್ ಜಿ ಪಾರ್ಥಿಬನ್, ಪಿ ಪಳನಿಯಪ್ಪನ್, ಜಯಂತಿ ಪದ್ಮನಾಭನ್, ಸೇಂತಿಲ್ ಬಾಲಾಜಿ, ಆರ್ ಮುರುಗನ್, ಆರ್ ಬಾಲಸುಬ್ರಹ್ಮಣಿ ಮತ್ತು ಎಸ್ ಮುತ್ತೈಯ ಎಂಬುವರು ಮದ್ರಾಸ್ ಹೈಕೋರ್ಟ್ ನ ಮೊರೆ ಹೋಗಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ದುರೈಸ್ವಾಮಿ ಅವರು ಅಕ್ಟೋಬರ್ 4ಕ್ಕೆ ವಿಚಾರಣೆಯನ್ನು ಮುಂದೂಡಿದೆ. 
ಸ್ಪೀಕರ್ ಧನಪಾಲ್ ಅವರು 1986ರ ತಮಿಳುನಾಡು ವಿಧಾನಸಭೆ ಪಕ್ಷಪಾತ ಕಾನೂನಿನ ಅಡಿಯಲ್ಲಿ ಟಿಟಿವಿ ದಿನಕರನ್ ಬೆಂಬಲಿತ ಶಾಸಕರಾದ ತಂಗ ತಮಿಳ್ ಸೆಲ್ವನ್, ಸೆಂಥಿಲ್ ಬಾಲಾಜಿ, ಪಿ ವೆಟ್ರಿವೇಲ್ ಮತ್ತು ಕೆ ಮರಿಯಪ್ಪನ್ ಸೇರಿದಂತೆ ಒಟ್ಟು 18 ಮಂದಿ ಶಾಸಕರನ್ನು ಅನರ್ಹಗೊಳಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT