ಡೇರಾ ಸಚ್ಚಾ ಸೌಧ ಆಶ್ರಮ 
ದೇಶ

ಡೇರಾ ಆಶ್ರಮದ ಕೇಂದ್ರ ಕಚೇರಿಯಲ್ಲಿ 600ಕ್ಕೂ ಹೆಚ್ಚು ಮಾನವ ಅಸ್ಥಿಪಂಜರಗಳು ಪತ್ತೆ!

ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಸೇರಿರುವ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್'ನ ಡೇರಾ ಸಚ್ಚಾ ಸೌಧ ಆಶ್ರಮದ ಕೇಂದ್ರ ಕಚೇರಿಯಲ್ಲಿ ಸುಮಾರು 600ಕ್ಕೂ ಹೆಚ್ಚು ಮಾನವ ಅಸ್ಥಿಪಂಜರಗಳನ್ನು...

ಸಿರ್ಸಾ: ಅತ್ಯಾಚಾರ ಪ್ರಕರಣ ಸಂಬಂಧ ಜೈಲು ಸೇರಿರುವ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್'ನ ಡೇರಾ ಸಚ್ಚಾ ಸೌಧ ಆಶ್ರಮದ ಕೇಂದ್ರ ಕಚೇರಿಯಲ್ಲಿ ಸುಮಾರು 600ಕ್ಕೂ ಹೆಚ್ಚು ಮಾನವ ಅಸ್ಥಿಪಂಜರಗಳನ್ನು ಸಮಾಧಿ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಸಿರ್ಸಾದಲ್ಲಿರುವ ಡೇರಾ ಕೇಂದ್ರ ಕಚೇರಿಯೊಳಗೆ ಬೃಹತ್ ಪ್ರಮಾಣದಲ್ಲಿ ಅಸ್ಥಿಪಂಜರಗಳನ್ನು ಸಮಾಧಿ ಮಾಡಲಾಗಿದೆ. ಅಲ್ಲದೆ, ಸಮಾಧಿಗಳ ಮೇಲೆ ಗಿಡಗಳನ್ನು ನೆಡಲಾಗಿದ್ದು, ಕೆಲವು ದೊಡ್ಡ ಮರಗಳಾಗಿವೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 
ಸಮಾಧಿಯಾಗುವುದು ಎಂದರೆ, ಮೋಕ್ಷ ಸಿಕ್ಕಂತೆ ಎಂಬ ಬಾಬಾ ಗುರ್ಮಿತ್ ರಾಮ್ ರಹೀಮ್ ಸಿಂಗ್'ನ ಆದೇಶದ ಬಳಿಕ ಅಸ್ಥಿಪಂಜರಗಳನ್ನು ಹೂತು ಹಾಕಲಾಗುತ್ತಿತ್ತು ಎಂದು ವರದಿಯಲ್ಲಿ ವಿವರಿಸಲಾಗಿದೆ. 
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಹರಿಯಾಣ ಮೂಲದ ಪತ್ರಕರ್ತ ರಾಮಾನಂದ್ ಟಾಟಿಯಾ ಅವರು, ಡೇರಾ ಆಶ್ರಮದ ಮುಖ್ಯ ಕಚೇರಿಯೊಳಗೆ ಬೃಹತ್ ಮಟ್ಟದಲ್ಲಿ ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಗುರ್ಮಿತ್ ಆದೇಶಕ್ಕೆ ವಿರುದ್ಧವಾಗಿ ಅಥವಾ ಆತನನ್ನು ವಿರೋಧಿಸುವವರನ್ನು ಕ್ರೂರವಾಗಿ ಹತ್ಯೆ ಮಾಡಲಾಗುತ್ತಿತ್ತು. ಬಳಿಕ ಆಶ್ರಮದೊಳಗೆ ಮೃತದೇಹವನ್ನು ತಂದು ಸಮಾಧಿ ಮಾಡಲಾಗುತ್ತಿದ್ದು ಎಂದು ಹೇಳಿಕೊಂಡಿದ್ದಾರೆ. 
ಡೇರಾ ಆಶ್ರಮದೊಳಗೆ 15 ವರ್ಷಗಳ ಹಿಂದೆ ಇಬ್ಬರು ಮಹಿಳಾ ಸಾಧ್ವಿಗಳ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

SCROLL FOR NEXT