ಭೂಗತ ಪಾತಕಿ ದಾವೂದ್ ಇಬ್ರಾಹಿಂ 
ದೇಶ

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಾಕ್'ನಲ್ಲಿ 4 ಬಾರಿ ಸ್ಥಳ ಬದಲಿಸಿದ್ದ ದಾವೂದ್: ಇಕ್ಬಾಲ್ ಕಸ್ಕರ್

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳ ಬದಲಾಯಿಸಿದ್ದ ಎಂದು ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ...

ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳ ಬದಲಾಯಿಸಿದ್ದ ಎಂದು ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಗುರುವಾರ ಹೇಳಿಕೊಂಡಿದ್ದಾನೆ.
ಹಣ ಸುಲಿಗೆ ಪ್ರಕರಣ ಸಂಬಂಧ ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಕಸ್ಕರ್ ಹಲವು ಮಹತ್ವದ ಮಾಹಿತಿಗಳನ್ನು ಹೊರಹಾಕಿದ್ದಾನೆಂದು ತಿಳಿದುಬಂದಿದೆ.
ವಿಚಾರಣೆ ವೇಳೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆಂದು ಕಸ್ಕರ್ ಬಾಯ್ಬಿಟ್ಟಿದ್ದಾನೆ. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಾವೂದ್ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳವನ್ನು ಬದಲಾವಣೆ ಮಾಡಿದ್ದ ಎಂದು ತಿಳಿಸಿದ್ದಾನೆ.
ದಾವೂದ್'ಗೆ ಪಾಕಿಸ್ತಾನದಲ್ಲಿ ಬಲಿಷ್ಠವಾದ ಭದ್ರತೆಯನ್ನು ನೀಡಲಾಗಿದ್ದು, ಕುಟುಂಬ ಸದಸ್ಯರೊಂದಿಗೂ ದೂರವಾಣಿ ಮೂಲಕ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾನೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT