ಭೂಗತ ಪಾತಕಿ ದಾವೂದ್ ಇಬ್ರಾಹಿಂ 
ದೇಶ

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಾಕ್'ನಲ್ಲಿ 4 ಬಾರಿ ಸ್ಥಳ ಬದಲಿಸಿದ್ದ ದಾವೂದ್: ಇಕ್ಬಾಲ್ ಕಸ್ಕರ್

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳ ಬದಲಾಯಿಸಿದ್ದ ಎಂದು ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ...

ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳ ಬದಲಾಯಿಸಿದ್ದ ಎಂದು ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಗುರುವಾರ ಹೇಳಿಕೊಂಡಿದ್ದಾನೆ.
ಹಣ ಸುಲಿಗೆ ಪ್ರಕರಣ ಸಂಬಂಧ ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಕಸ್ಕರ್ ಹಲವು ಮಹತ್ವದ ಮಾಹಿತಿಗಳನ್ನು ಹೊರಹಾಕಿದ್ದಾನೆಂದು ತಿಳಿದುಬಂದಿದೆ.
ವಿಚಾರಣೆ ವೇಳೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆಂದು ಕಸ್ಕರ್ ಬಾಯ್ಬಿಟ್ಟಿದ್ದಾನೆ. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಾವೂದ್ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳವನ್ನು ಬದಲಾವಣೆ ಮಾಡಿದ್ದ ಎಂದು ತಿಳಿಸಿದ್ದಾನೆ.
ದಾವೂದ್'ಗೆ ಪಾಕಿಸ್ತಾನದಲ್ಲಿ ಬಲಿಷ್ಠವಾದ ಭದ್ರತೆಯನ್ನು ನೀಡಲಾಗಿದ್ದು, ಕುಟುಂಬ ಸದಸ್ಯರೊಂದಿಗೂ ದೂರವಾಣಿ ಮೂಲಕ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾನೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT