ಸಂಗ್ರಹ ಚಿತ್ರ 
ದೇಶ

ಸಿಮಿ ಉಗ್ರರ ಎನ್ ಕೌಂಟರ್: ಮಧ್ಯ ಪ್ರದೇಶ ಪೊಲೀಸರಿಗೆ ನ್ಯಾಯಾಂಗ ಆಯೋಗದ ಕ್ಲೀನ್ ಚಿಟ್

ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ ಮೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ 8 ಮಂದಿ ಶಂಕಿತ ಉಗ್ರರ ಎನ್‌ ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಆಯೋಗವು ಮಧ್ಯ ಪ್ರದೇಶ ಪೊಲೀಸ್ ಇಲಾಖೆಗೆ ಕ್ಲೀನ್ ಚಿಟ್ ನೀಡಿದೆ.

ಭೋಪಾಲ್: ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ ಮೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ 8 ಮಂದಿ ಶಂಕಿತ ಉಗ್ರರ ಎನ್‌ ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಆಯೋಗವು ಮಧ್ಯ ಪ್ರದೇಶ ಪೊಲೀಸ್  ಇಲಾಖೆಗೆ ಕ್ಲೀನ್ ಚಿಟ್ ನೀಡಿದೆ.
ಕಳೆದ 2016ರ ಅಕ್ಟೋಬರ್ 30ರ ರಾತ್ರಿ ಭೋಪಾಲ್ ಸೆಂಟ್ರಲ್ ಜೈಲಿನಲ್ಲಿದ್ದ ಶಂಕಿತ ಸಿಮಿ ಕಾರ್ಯಕರ್ತರು ಜೈಲಿನ ಓರ್ಪ ಸಿಬ್ಬಂದಿಯನ್ನು ಕೊಂದು ತಪ್ಪಿಸಿಕೊಂಡಿದ್ದರು. ವಿಚಾರ ತಿಳಿಯುತ್ತಿದ್ದಂತೆಯೇ ಕಾರ್ಯಾಚರಣೆ ನಡೆಸಿದ್ದ  ಭೋಪಾಲ್ ಪೊಲೀಸರು ಮಾರನೆ ದಿನ ಭೋಪಾಲ್ ಹೊರವಲಯದಲ್ಲಿ ಕಾರ್ಯಾಚರಣೆ ನಡೆಸಿ ತಪ್ಪಿಸಿಕೊಂಡಿದ್ದ ಎಲ್ಲ 8 ಮಂದಿ ಶಂಕಿತ ಉಗ್ರರನ್ನೂ ಎನ್ ಕೌಂಟರ್ ನಲ್ಲಿ ಕೊಂದು ಹಾಕಿದ್ದರು. ಈ ಘಟನೆ ಸಂಬಂಧ ಸಾಮಾಜಿಕ  ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋಗಳು ಇದನ್ನು ನಕಲಿ ಎನ್ ಕೌಂಟರ್ ಎಂದು ಬಿಂಬಿಸತೊಡಗಿದ್ದವು.

ಇದರಿಂದ ಮುಜುಗರಕ್ಕೀಡಾಗಿದ್ದ ಮಧ್ಯ ಪ್ರದೇಶ ಸರ್ಕಾರ ಪ್ರಕರಣ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಸ್.ಕೆ.ಪಾಂಡೆ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆಗೆ ಆದೇಶಿಸಿತ್ತು. ಆಯೋಗ ಇದೀಗ ತನ್ನ ವಿಚಾರಣೆ  ಪೂರ್ಣಗೊಳಿಸಿದ್ದು, ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಪ್ರಭಾಂಶು ಕಮಾಲ್ ಅವರಿಗೆ 12 ಪುಟಗಳ ವರದಿ ಸಲ್ಲಿಸಿದೆ. ಇದನ್ನು ಮಧ್ಯಪ್ರದೇಶ ಸರ್ಕಾರ ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದ್ದು, ವರದಿಯಲ್ಲಿ ಪೊಲೀಸರಿಗೆ ಕ್ಲೀನ್  ಚಿಟ್ ನೀಡಲಾಗಿದೆ.

"ಗ್ರಾಮಸ್ಥರು ನೀಡಿರುವ ಹೇಳಿಕೆ ಮತ್ತು ಪೊಲೀಸರು ನೀಡಿರುವ ಹೇಳಿಕೆಯಲ್ಲಿ ಯಾವ ವೈರುಧ್ಯವೂ ಇಲ್ಲ. ಗ್ರಾಮಸ್ಥರು ಈ ಘಟನೆಗೆ ಪ್ರತ್ಯಕ್ಷದರ್ಶಿಗಳಾಗಿದ್ದು, ಅವರ ಹೇಳಿಕೆಗಳು ಅಧಿಕೃತ ದಾಖಲೆಗಳಿಗೆ ತಾಳೆಯಾಗುತ್ತವೆ" ಎಂದು  ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಮಧ್ಯ ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT