ದೇಶ

ಉರಿ ಸೆಕ್ಟರ್'ನಲ್ಲಿ ಎನ್'ಕೌಂಟರ್: ಮೂವರು ಉಗ್ರರ ಹತ್ಯೆಗೈದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್'ನಲ್ಲಿ ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರ ಹುಟ್ಟಡಗಿಸಿದ್ದಾರೆ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್'ನಲ್ಲಿ ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರ ಹುಟ್ಟಡಗಿಸಿದ್ದಾರೆ. 
ಉರಿ ವಲಯದ ಕರ್ಗಿಯಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭಾರತೀಯ ಸೇನಾಪಡೆ ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿತ್ತು. 
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಸೇನಾಪಡೆ ಉಗ್ರರ ವಿರುದ್ದ ಗುಂಡಿನ ದಾಳಿ ನಡೆಸಿದ್ದು ಈ ಕಾರ್ಯಾಚರಣೆಯಲ್ಲಿ ಇಲ್ಲಿಯವರೆಗೂ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. 
ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈಗಾಗಲೇ ಗಡಿ ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. 
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಯಾವುದೇ ಭಾರತೀಯ ಯೋಧ ಗಾಯಗೊಂಡಿರುವ ವರದಿಯಾಗಿಲ್ಲ. ಇನ್ನು ಕಾರ್ಯಾಚರಣೆ ವೇಳೆ ಮೂವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 
ಕಳೆದ ವರ್ಷ ಉರಿ ಸೆಕ್ಟರ್ ನ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 19 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇಂದು ಸಹ ಉಗ್ರರು ಇದೇ ನಿಟ್ಟಿನಲ್ಲಿ ದಾಳಿಗೆ ಮುಂದಾಗಿದ್ದು ಉಗ್ರರ ಸಂಚನ್ನು ಭಾರತೀಯ ಯೋಧರು ವಿಫಲಗೊಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT