ಜೆ ಜಯಲಲಿತಾ 
ದೇಶ

ಜಯಲಲಿತಾ ಸಾವು ತನಿಖೆಗೆ ವಿಚಾರಣಾ ಆಯೋಗ ರಚಿಸಿದ ತಮಿಳುನಾಡು ಸರ್ಕಾರ!

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರು ಮೃತಪಟ್ಟು 10 ತಿಂಗಳ ನಂತರ ಅವರ ಸಾವಿನ ಕುರಿತ ತನಿಖೆಗೆ ವಿಚಾರಣಾ ಆಯೋಗ ತಮಿಳುನಾಡು...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರು ಮೃತಪಟ್ಟು 10 ತಿಂಗಳ ನಂತರ ಅವರ ಸಾವಿನ ಕುರಿತ ತನಿಖೆಗೆ ವಿಚಾರಣಾ ಆಯೋಗ ತಮಿಳುನಾಡು ಸರ್ಕಾರ ರಚಿಸಿದೆ.
ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಾಮೂರ್ತಿ ಆರುಮುಗ ಸ್ವಾಮಿ ನೇತೃತ್ವದಲ್ಲಿ ವಿಚಾರಣೆ ಆಯೋಗದ ರಚಿಸಿರುವ ಸರ್ಕಾರ ಜೆ ಜಯಲಲಿತಾ ಅವರ ಸಾವಿನ ಕುರಿತಾದ ಸಮಗ್ರ ವರದಿಯನ್ನು ನೀಡುವಂತೆ ಸರ್ಕಾರ ಹೇಳಿದೆ. 
ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಆಗಸ್ಟ್ 17ರಂದು ವಿಚಾರಣೆ ಆಯೋಗವನ್ನು ರಚಿಸುವುದಾಗಿ ಘೋಷಿಸಿದ್ದರು. ಅಂತೆ ಇಂದು ನ್ಯಾಯಮೂರ್ತಿ ಆರುಮುಗಸ್ವಾಮಿ ಅವರನ್ನೊಳಗೊಂಡ ವಿಚಾರಣೆ ಆಯೋಗವನ್ನು ಸರ್ಕಾರ ರಚಿಸಿದೆ. 
ಹೃದಯ ಸ್ತಂಭನ ಸಮಸ್ಯೆಗೆ ಒಳಗಾಗಿದ್ದ ಜಯಲಲಿತಾ ಅವರು 75 ದಿನಗಳ ಕಾಲ ಸಾವು ಬದುಕಿನ ಹೋರಾಟ ನಡೆಸಿ ಡಿಸೆಂಬರ್ 5ರಂದು ಮೃತಪಟ್ಟಿದ್ದರು. 
ಜಯಲಲಿತಾ ಸಾವಿನ ಪ್ರಕರಣ ತನಿಖೆ ಮಾಡಬೇಕು ಎಂದು ಬಂಡಾಯ ನಾಯಕರು ಹಾಗೂ ಉಪ ಮುಖ್ಯಮಂತ್ರಿ ಓ. ಪನ್ನೀರು ಸೆಲ್ವಂ ಅವರು ಆಗ್ರಹಿಸಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

ವಿವಾಹ ಸಮಾರಂಭದಲ್ಲಿ ಅಸಭ್ಯ ವರ್ತನೆಗೆ ವಿರೋಧಿಸಿದ ಕ್ರೀಡಾಪಟುವಿನ ಮೇಲೆ ಕಬ್ಬಿಣದ ರಾಡ್ ನಿಂದ ಗುಂಪು ಹಲ್ಲೆ; ಭೀಕರ ಕೊಲೆ!

ಸಂಸತ್ ಚಳಿಗಾಲದ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ!

ಎಲ್ ಒಸಿಯಾದ್ಯಂತ ಲಾಂಚ್ ಪ್ಯಾಡ್‌ಗಳು: ಚಳಿಗಾಲಕ್ಕಾಗಿ ಕಾಯುತ್ತಿರುವ ಉಗ್ರರು, ಪಾಕ್ ಗೆ ತಕ್ಕ ಉತ್ತರ ನೀಡಲು ಸೇನೆ ಸಜ್ಜು!

SCROLL FOR NEXT