ಸಿಸಿಟಿವಿ ದೃಶ್ಯಾವಳಿ 
ದೇಶ

ದೆಹಲಿಯಲ್ಲಿ ಹನಿಪ್ರೀತ್ ಸಿಂಗ್..?: ವೈರಲ್ ಆಯ್ತು ಬುರ್ಖಾ ಧರಿಸಿದ ಮಹಿಳೆ ಸಿಸಿಟಿವಿ ವಿಡಿಯೋ

ಅತ್ಯಾಚಾರಿ ಬಾಬಾ ರಾಮ್ ರಹೀಂ ನ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ಇನ್ಸಾನ್ ಬಂಧನ ಭೀತಿಯಿಂದ ಪೊಲೀಸರ ಕಣ್ತಪ್ಪಿಸಿ ತಿರುಗಾಡುತ್ತಿದ್ದು, ಇದೀಗ ದೆಹಲಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಅತ್ಯಾಚಾರಿ ಬಾಬಾ ರಾಮ್ ರಹೀಂ ನ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ಇನ್ಸಾನ್ ಬಂಧನ ಭೀತಿಯಿಂದ ಪೊಲೀಸರ ಕಣ್ತಪ್ಪಿಸಿ ತಿರುಗಾಡುತ್ತಿದ್ದು, ಇದೀಗ ದೆಹಲಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಹನಿಪ್ರೀತ್ ಸಿಂಗ್ ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದು ಸುದ್ದಿಯಾಗಿ ನೇಪಾಳಕ್ಕೂ ತನಿಖಾಧಿಕಾರಿಗಳು ಹೋಗಿ ಬಂದಿದ್ದರು. ಇದೀಗ ಇದೇ ಹನಿಪ್ರೀತ್ ಸಿಂಗ್ ಕುರಿತ ಹೊಸ ಸುದ್ದಿಯೊಂದು ವೈರಲ್ ಆಗುತ್ತಿದೆ.  ಮಾಧ್ಯಮವೊಂದು ವರದಿ ಮಾಡಿರುವಂತೆ ಬಂಧನ ಭೀತಿಯಲ್ಲಿರುವ ಹನಿಪ್ರೀತ್ ಸಿಂಗ್ ತಮ್ಮ ವಕೀಲರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿದ್ದರು ಎಂದು ಹೇಳಲಾಗಿದೆ. ದೆಹಲಿಯ ಲಜಪತ್ ನಗರದಲ್ಲಿರುವ ವಕೀಲರನ್ನು  ಭೇಟಿ ಮಾಡಲು ಹನಿಪ್ರೀತ್ ಸಿಂಗ್ ಬುರ್ಖಾ ಧರಿಸಿ ಆಗಮಿಸಿದ್ದರು ಎಂದು ಹೇಳಲಾಗಿದೆ.

ಈ ಸಂಬಂಧ ಸಿಸಿಟಿವಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಬುರ್ಖಾಧರಿಸಿದ ಮಹಿಳೆಯೊಬ್ಬರು ಲಜಪತ್ ನಗರದಲ್ಲಿರುವ ವಕೀಲರ ಕಚೇರಿಗೆ ತೆರಳುತ್ತಿರುವುದು ಕಂಡುಬಂದಿದೆ. ಈ ಬುರ್ಖಾ ಧರಿಸಿದ  ಮಹಿಳೆಯೇ ಹನಿ ಪ್ರೀತ್ ಸಿಂಗ್ ಇರಬಹುದು ಎಂದು ಶಂಕಿಸಲಾಗಿದೆ. ಇದಕ್ಕೆ ಇಂಬು ನೀಡುವಂತೆ ಹನಿಪ್ರೀತ್ ಸಿಂಗ್ ಕೂಡ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದು, ತಮಗೆ ಜೀವ ಬೆದರಿಕೆ ಇದೆ ಎಂದು  ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ಅತ್ಯಾಚಾರ ಪ್ರಕರಣ ಸಂಬಂಧ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ರಾಮ್ ರಹೀಂ ಗೆ ಶಿಕ್ಷೆ ವಿಧಿಸಿತ್ತು. ಈ ವೇಳೆ ಪಂಚಕುಲದಲ್ಲಿ ವ್ಯಾಪಕ ಹಿಂಸಾಚಾರವಾಗಿ ಹಲವರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಡೇರಾ ಆಶ್ರಮದ  ಅನುಯಾಯಿಗಳಿಗೆ ಹಿಂಸಾಚಾರ ನಡೆಸಲು ಹನಿಪ್ರೀತ್ ಪ್ರಚೋದನೆ ನೀಡಿದ್ದರು ಎಂಬ ಆರೋಪವಿದೆ. ಅಲ್ಲದೆ ರಾಮ್ ರಹೀಂ ಬಂಧನದ ವೇಳೆ ಆತ ತಪ್ಪಿಸಿಕೊಂಡು ಹೋಗಲು ಆಕೆ ಸಂಚು ರೂಪಿಸಿದ್ದಳು ಎಂಬ ಗಂಭೀರ  ಆರೋಪ ಕೂಡ ಆಕೆಯ ಮೇಲಿದ್ದು, ಇದಲ್ಲದೆ ಆಶ್ರಮದಲ್ಲಿ ನಡೆದ ಹಲವು ಅಪರಾಧ ಪ್ರಕರಣಗಳಲ್ಲೂ ಹನಿಪ್ರೀತ್ ಸಿಂಗ್ ಪೊಲೀಸರಿಗೆ ಬೇಕಾಗಿದ್ದಾಳೆ. ಇದೇ ಕಾರಣಕ್ಕೆ ಆಕೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT