ಸಿಸಿಟಿವಿ ದೃಶ್ಯಾವಳಿ 
ದೇಶ

ದೆಹಲಿಯಲ್ಲಿ ಹನಿಪ್ರೀತ್ ಸಿಂಗ್..?: ವೈರಲ್ ಆಯ್ತು ಬುರ್ಖಾ ಧರಿಸಿದ ಮಹಿಳೆ ಸಿಸಿಟಿವಿ ವಿಡಿಯೋ

ಅತ್ಯಾಚಾರಿ ಬಾಬಾ ರಾಮ್ ರಹೀಂ ನ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ಇನ್ಸಾನ್ ಬಂಧನ ಭೀತಿಯಿಂದ ಪೊಲೀಸರ ಕಣ್ತಪ್ಪಿಸಿ ತಿರುಗಾಡುತ್ತಿದ್ದು, ಇದೀಗ ದೆಹಲಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಅತ್ಯಾಚಾರಿ ಬಾಬಾ ರಾಮ್ ರಹೀಂ ನ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ಇನ್ಸಾನ್ ಬಂಧನ ಭೀತಿಯಿಂದ ಪೊಲೀಸರ ಕಣ್ತಪ್ಪಿಸಿ ತಿರುಗಾಡುತ್ತಿದ್ದು, ಇದೀಗ ದೆಹಲಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಹನಿಪ್ರೀತ್ ಸಿಂಗ್ ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದು ಸುದ್ದಿಯಾಗಿ ನೇಪಾಳಕ್ಕೂ ತನಿಖಾಧಿಕಾರಿಗಳು ಹೋಗಿ ಬಂದಿದ್ದರು. ಇದೀಗ ಇದೇ ಹನಿಪ್ರೀತ್ ಸಿಂಗ್ ಕುರಿತ ಹೊಸ ಸುದ್ದಿಯೊಂದು ವೈರಲ್ ಆಗುತ್ತಿದೆ.  ಮಾಧ್ಯಮವೊಂದು ವರದಿ ಮಾಡಿರುವಂತೆ ಬಂಧನ ಭೀತಿಯಲ್ಲಿರುವ ಹನಿಪ್ರೀತ್ ಸಿಂಗ್ ತಮ್ಮ ವಕೀಲರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿದ್ದರು ಎಂದು ಹೇಳಲಾಗಿದೆ. ದೆಹಲಿಯ ಲಜಪತ್ ನಗರದಲ್ಲಿರುವ ವಕೀಲರನ್ನು  ಭೇಟಿ ಮಾಡಲು ಹನಿಪ್ರೀತ್ ಸಿಂಗ್ ಬುರ್ಖಾ ಧರಿಸಿ ಆಗಮಿಸಿದ್ದರು ಎಂದು ಹೇಳಲಾಗಿದೆ.

ಈ ಸಂಬಂಧ ಸಿಸಿಟಿವಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಬುರ್ಖಾಧರಿಸಿದ ಮಹಿಳೆಯೊಬ್ಬರು ಲಜಪತ್ ನಗರದಲ್ಲಿರುವ ವಕೀಲರ ಕಚೇರಿಗೆ ತೆರಳುತ್ತಿರುವುದು ಕಂಡುಬಂದಿದೆ. ಈ ಬುರ್ಖಾ ಧರಿಸಿದ  ಮಹಿಳೆಯೇ ಹನಿ ಪ್ರೀತ್ ಸಿಂಗ್ ಇರಬಹುದು ಎಂದು ಶಂಕಿಸಲಾಗಿದೆ. ಇದಕ್ಕೆ ಇಂಬು ನೀಡುವಂತೆ ಹನಿಪ್ರೀತ್ ಸಿಂಗ್ ಕೂಡ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದು, ತಮಗೆ ಜೀವ ಬೆದರಿಕೆ ಇದೆ ಎಂದು  ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ಅತ್ಯಾಚಾರ ಪ್ರಕರಣ ಸಂಬಂಧ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ರಾಮ್ ರಹೀಂ ಗೆ ಶಿಕ್ಷೆ ವಿಧಿಸಿತ್ತು. ಈ ವೇಳೆ ಪಂಚಕುಲದಲ್ಲಿ ವ್ಯಾಪಕ ಹಿಂಸಾಚಾರವಾಗಿ ಹಲವರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಡೇರಾ ಆಶ್ರಮದ  ಅನುಯಾಯಿಗಳಿಗೆ ಹಿಂಸಾಚಾರ ನಡೆಸಲು ಹನಿಪ್ರೀತ್ ಪ್ರಚೋದನೆ ನೀಡಿದ್ದರು ಎಂಬ ಆರೋಪವಿದೆ. ಅಲ್ಲದೆ ರಾಮ್ ರಹೀಂ ಬಂಧನದ ವೇಳೆ ಆತ ತಪ್ಪಿಸಿಕೊಂಡು ಹೋಗಲು ಆಕೆ ಸಂಚು ರೂಪಿಸಿದ್ದಳು ಎಂಬ ಗಂಭೀರ  ಆರೋಪ ಕೂಡ ಆಕೆಯ ಮೇಲಿದ್ದು, ಇದಲ್ಲದೆ ಆಶ್ರಮದಲ್ಲಿ ನಡೆದ ಹಲವು ಅಪರಾಧ ಪ್ರಕರಣಗಳಲ್ಲೂ ಹನಿಪ್ರೀತ್ ಸಿಂಗ್ ಪೊಲೀಸರಿಗೆ ಬೇಕಾಗಿದ್ದಾಳೆ. ಇದೇ ಕಾರಣಕ್ಕೆ ಆಕೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT