ತೇಜಸ್ವಿ ಯಾದವ್ 
ದೇಶ

ಭ್ರಷ್ಟಾಚಾರ ಪ್ರಕರಣ: ಸಿಬಿಐ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ತೇಜಸ್ವಿ

2006ರಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍(ಐಆರ್ಸಿಟಿಸಿ) ಹೊಟೇಲ್ ನಡೆಸಲು ಎರಡು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ನವದೆಹಲಿ: 2006ರಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍(ಐಆರ್ಸಿಟಿಸಿ) ಹೊಟೇಲ್ ನಡೆಸಲು ಎರಡು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕೋರಿದ್ದಾರೆ. 
2006ರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಹೊಟೇಲ್ ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಸಿಬಿಐ ಲಾಲೂ ಪ್ರಸಾದ್, ಪತ್ನಿ ರಾಬ್ರಿದೇವಿ ಹಾಗೂ ತೇಜಸ್ವಿ ಯಾದವ್ ವಿರುದ್ಧ ದೂರು ದಾಖಲಿಸಿತ್ತು. 
ಈ ಸಂಬಂಧ ಲಾಲೂ ನಿವಾಸ, ದೆಹಲಿ, ಪಾಟ್ನಾ ಗುರುಗಾಂವ್ ಸೇರಿದಂತೆ ಒಟ್ಟು 12 ಕಡೆ ಸಿಬಿಐ ಜೂನ್ ನಲ್ಲಿ ದಾಳಿ ನಡೆಸಿತ್ತು. ಅಲ್ಲದೆ ಸಿಬಿಐ ಕೋರ್ಟ್ ಮುಂದೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮಗೆ 15 ದಿನಗಳ ಹೆಚ್ಚು ಕಾಲಾವಕಾಶ ನೀಡುವಂತೆ ಕೋರಿದ್ದಾರೆ. 
ಪುರಿ ಮತ್ತು ರಾಂಚಿಯಲ್ಲಿ ರೈಲ್ವೆಗಾಗಿ ಎರಡು ಹೋಟೆಲ್ ಗಳನ್ನು ನಡೆಸಲು ಹರ್ಷ್ ಕೊಚ್ಚರ್ ಎಂಬುವರಿಗೆ 15 ವರ್ಷಗಳ ಗುತ್ತಿಗೆ ನೀಡಿದ್ದು ಅದಕ್ಕೆ ಪ್ರತಿಯಾಗಿ ಲಾಲೂ ಪ್ರಸಾದ್ ಯಾದವ್ ಕುಟುಂಬ ಪಾಟ್ನಾದಲ್ಲಿ ಎರಡು ಎಕರೆ ಜಮೀನನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT