ತೇಜಸ್ವಿ ಯಾದವ್ 
ದೇಶ

ಭ್ರಷ್ಟಾಚಾರ ಪ್ರಕರಣ: ಸಿಬಿಐ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ತೇಜಸ್ವಿ

2006ರಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍(ಐಆರ್ಸಿಟಿಸಿ) ಹೊಟೇಲ್ ನಡೆಸಲು ಎರಡು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ನವದೆಹಲಿ: 2006ರಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍(ಐಆರ್ಸಿಟಿಸಿ) ಹೊಟೇಲ್ ನಡೆಸಲು ಎರಡು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕೋರಿದ್ದಾರೆ. 
2006ರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಹೊಟೇಲ್ ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಸಿಬಿಐ ಲಾಲೂ ಪ್ರಸಾದ್, ಪತ್ನಿ ರಾಬ್ರಿದೇವಿ ಹಾಗೂ ತೇಜಸ್ವಿ ಯಾದವ್ ವಿರುದ್ಧ ದೂರು ದಾಖಲಿಸಿತ್ತು. 
ಈ ಸಂಬಂಧ ಲಾಲೂ ನಿವಾಸ, ದೆಹಲಿ, ಪಾಟ್ನಾ ಗುರುಗಾಂವ್ ಸೇರಿದಂತೆ ಒಟ್ಟು 12 ಕಡೆ ಸಿಬಿಐ ಜೂನ್ ನಲ್ಲಿ ದಾಳಿ ನಡೆಸಿತ್ತು. ಅಲ್ಲದೆ ಸಿಬಿಐ ಕೋರ್ಟ್ ಮುಂದೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮಗೆ 15 ದಿನಗಳ ಹೆಚ್ಚು ಕಾಲಾವಕಾಶ ನೀಡುವಂತೆ ಕೋರಿದ್ದಾರೆ. 
ಪುರಿ ಮತ್ತು ರಾಂಚಿಯಲ್ಲಿ ರೈಲ್ವೆಗಾಗಿ ಎರಡು ಹೋಟೆಲ್ ಗಳನ್ನು ನಡೆಸಲು ಹರ್ಷ್ ಕೊಚ್ಚರ್ ಎಂಬುವರಿಗೆ 15 ವರ್ಷಗಳ ಗುತ್ತಿಗೆ ನೀಡಿದ್ದು ಅದಕ್ಕೆ ಪ್ರತಿಯಾಗಿ ಲಾಲೂ ಪ್ರಸಾದ್ ಯಾದವ್ ಕುಟುಂಬ ಪಾಟ್ನಾದಲ್ಲಿ ಎರಡು ಎಕರೆ ಜಮೀನನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

SCROLL FOR NEXT