ಗಡಿ ಭದ್ರತಾ ಸಿಬ್ಬಂದಿ 
ದೇಶ

ಬಿಎಸ್ಎಫ್ ಆಪರೇಷನ್ ಅರ್ಜುನ್ ಕಾರ್ಯಾಚರಣೆ: ಗಡಿ ಕೇಂದ್ರ, ಪಾಕ್ ಅಧಿಕಾರಿಗಳ ನಿವಾಸಗಳೇ ಟಾರ್ಗೆಟ್!

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತದ ಗಡಿ ಭದ್ರತಾ ಸಿಬ್ಬಂದಿಗಳು ಆಪರೇಷನ್ ಅರ್ಜುನ್ ಕಾರ್ಯಾಚರಣೆ ಮೂಲಕ ಪಾಠ ಕಲಿಸಲು ಮುಂದಾಗಿದೆ

ನವದೆಹಲಿ: ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತದ ಗಡಿ ಭದ್ರತಾ ಸಿಬ್ಬಂದಿಗಳು ಆಪರೇಷನ್ ಅರ್ಜುನ್ ಕಾರ್ಯಾಚರಣೆ ಮೂಲಕ ಪಾಠ ಕಲಿಸಲು ಮುಂದಾಗಿದ್ದು, ಪಾಕ್ ನ ಗಡಿ ಕೇಂದ್ರಗಳು, ಪಾಕಿಸ್ತಾನದ ಅಧಿಕಾರಿಗಳ ನಿವಾಸಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಭಾರತದ ಗಡಿ ಪ್ರದೇಶದಲ್ಲಿ ಜನತೆಯ ಮೇಲೆ ಗುಂಡು ಹಾರಿಸಿ, ಶೆಲ್ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಅದರದ್ದೇ  ಭಾಷೆಯಲ್ಲಿ ಉತ್ತರ ನೀಡಲು ಮುಂದಾಗಿದ್ದು, ಪಾಕಿಸ್ತಾನದ ಅಧಿಕಾರಿಗಳ ನಿವಾಸಗಳನ್ನೇ ಟಾರ್ಗೆಟ್ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. 
ಗಡಿ ಭದ್ರತಾ ಸಿಬ್ಬಂದಿಗಳು ಪಾಕಿಸ್ತಾನದ ಭಾಷೆಯಲ್ಲೇ ಉತ್ತರಿಸಲು ಪ್ರಾರಂಭಿಸಿರುವುದರಿಂದ ಪಾಕ್ ಗೆ ತೀವ್ರ ಹಾನಿ ಉಂಟಾಗಿದ್ದು, ಪಾಕಿಸ್ತಾನ ಮೂರು ದಿನಗಳ ಹಿಂದೆ ಕದನ ವಿರಾಮಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪಾಕಿಸ್ತಾನ ತನ್ನ ನಿವೃತ್ತ ಸೇನಾ ಅಧಿಕಾರಿಗಳು, ಐಎಸ್ಐ ಹಾಗೂ ಪಾಕಿಸ್ತಾನ ರೇಂಜರ್ಸ್ ಅಧಿಕಾರಿಗಳಿಗೆ ಭಾರತದ ಗಡಿ ಪ್ರದೇಶದ ಹತ್ತಿರವೇ ಭೂಮಿ ನೀಡಿದ್ದು, ಭಾರತದ ಗಡಿಯೊಳಗೆ ನುಸುಳಲು ಭಯೋತ್ಪಾದಕರಿಗೆ ಈ ನಿವೃತ್ತ ಅಧಿಕಾರಿಗಳು ಸಹಾಯ ಮಾಡುತ್ತಿದ್ದರು ಈ ಹಿನ್ನೆಲೆಯಲ್ಲಿ ಬಿಎಸ್ಎಫ್ ಯೋಧರು ಗಡಿ ಪ್ರದೇಶದ ಹತ್ತಿರವೇ ಇರುವ ಪಾಕಿಸ್ತಾನದ ನಿವೃತ್ತ ಅಧಿಕಾರಿಗಳ ನಿವಾಸಗಳನ್ನೇ ಟಾರ್ಗೆಟ್ ಮಾಡಿ ಆಪರೇಷನ್ ಅರ್ಜುನ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT