ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ಗಢ: ಭಾರತೀಯ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ನಕ್ಸಲರ ಜೊತೆಗಿನ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ವಿಶೇಷ ಕಾರ್ಯಾಚರಣಾ ಪಡೆಯ ಯೋಧರೊಬ್ಬರನ್ನು ಕರೆದೊಯ್ಯುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಛತ್ತೀಸ್ಗಢದ ರಾಯ್ಪುರ ಜಿಲ್ಲೆಯ ಅಭನ್ಪುರದಲ್ಲಿ...

ರಾಯ್ಪುರ: ನಕ್ಸಲರ ಜೊತೆಗಿನ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ವಿಶೇಷ ಕಾರ್ಯಾಚರಣಾ ಪಡೆಯ ಯೋಧರೊಬ್ಬರನ್ನು ಕರೆದೊಯ್ಯುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಛತ್ತೀಸ್ಗಢದ ರಾಯ್ಪುರ ಜಿಲ್ಲೆಯ ಅಭನ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಗಾಯಗೊಂಡಿದ್ದ ಯೋಧ ಅಂತೋಷ್ ಮರ್ಕಮ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಸಲುವಾಗಿ ಹೆಲಿಕಾಪ್ಟರ್ ನಾರಾಯಣ ಪುರ ಜಿಲ್ಲೆಯಿಂದ ರಾಯ್ಪುರಕ್ಕೆ ತೆರಳುತ್ತಿತ್ತು. ಈ ವೇಳೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಭರೆಂಗಾ ಗ್ರಾಮದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿ ಡಿಎಂ. ಅವಸ್ತಿ ಅವರು ಹೇಳಿದ್ದಾರೆ. 
ಘಟನೆಯಲ್ಲಿ ಯಾವುದೇ ಸಾವು-ನೋವುಗಳಾಗಲೀ, ನಷ್ಟವಾಗಲೀ ಸಂಭವಿಸಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಫರ್ಶ ಮಾಡಿದ ಕೆಲವೇ ನಿಮಿಷಗಳಲ್ಲಿ ಮತ್ತೊಂದು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿ ಗಾಯಗೊಂಡಿದ್ದ ಯೋಧನನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ತಿಳಿಸಿದ್ದಾರೆ. 
ಭಾಟ್'ಬೇಡಾ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿ ಕುಳಿತಿದ್ದರು. ನಕ್ಸಲರ ವಿರುದ್ಧ ಸೇನಾ ಪಡೆ ನಿನ್ನೆ ಬೆಳಿಗ್ಗೆ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ನಕ್ಸಲು ನಡೆಸಿದ್ದ ಗುಂಡಿನ ದಾಳಿಗೆ ಯೋಧ ಮರ್ಕಂ ಅವರು ತೀವ್ರವಾಗಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!