ಸಾಂದರ್ಭಿಕ ಚಿತ್ರ 
ದೇಶ

ಜಮ್ಮು: ಸಚಿವರ ಬೆಂಗಾವಲು ಮೇಲೆ ಗ್ರೆನೇಡ್ ದಾಳಿ, ಮೃತಪಟ್ಟ ನಾಗರಿಕರ ಸಂಖ್ಯೆ 3ಕ್ಕೆ ಏರಿಕೆ

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಗ್ರೆನೇಡ್ ಸ್ಫೋಟಗೊಂಡು....

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಗ್ರೆನೇಡ್ ಸ್ಫೋಟಗೊಂಡು ಗಾಯಗೊಂಡಿದ್ದ ನಾಗರಿಕ ಮೃತಪಟ್ಟಿದ್ದು, ಈ ಮೂಲಕ ಅಸುನೀಗಿದವರ ಸಂಖ್ಯೆ ಮೂರಕ್ಕೇರಿದೆ.
ಕಳೆದ 21ರಂದು ನಡೆದ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಸ್ಕಿಮ್ ಆಸ್ಪತ್ರೆಯ ಮುಷ್ತಾಕ್ ಅಹ್ಮದ್ ಶೇಖ್ ಇಂದು ಅಪರಾಹ್ನ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 21ರಂದು ಟ್ರಾಲ್ ನಲ್ಲಿ ರಾಜ್ಯ ಕಾರ್ಮಿಕ ಸಚಿವ ಸಯೀಮ್ ಅಖ್ತರ್ ಮೇಲೆ ಗ್ರೆನೇಡ್ ದಾಳಿ ನಡೆದಿತ್ತು. ದಾಳಿಯಲ್ಲಿ ಯಾವುದೇ ಅಪಾಯಕ್ಕೀಡಾಗದೆ ಸಚಿವರು ಪಾರಾಗಿದ್ದರು. ಆದರೆ ಇಬ್ಬರು ಮೃತಪಟ್ಟು 34 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT