ಭಾರತೀಯ ಸೇನೆ 
ದೇಶ

ಪಿಒಕೆಯಲ್ಲಿ ನಡೆಸಿದಂತೆ ಕಾಂಗೋದಲ್ಲಿ ಸರ್ಜಿಕಲ್ ದಾಳಿ ನಡೆಸಿ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿ ಜಗತ್ತಿಗೆ ತನ್ನ ತಾಕತ್ತನ್ನು ತೋರಿಸಿದ್ದ ಭಾರತೀಯ ಸೇನೆ ಇದೀಗ ವಿಶ್ವಸಂಸ್ಥೆಯ...

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿ ಜಗತ್ತಿಗೆ ತನ್ನ ತಾಕತ್ತನ್ನು ತೋರಿಸಿದ್ದ ಭಾರತೀಯ ಸೇನೆ ಇದೀಗ ವಿಶ್ವಸಂಸ್ಥೆಯ ಶಾಂತಿ ಪಾಲನೆಗಾಗಿ ನಿಯೋಜನೆಗೊಂಡಿರುವ ಭಾರತೀಯ ಯೋಧರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಉಗ್ರ ಕಪಿಮುಷ್ಠಿಗೆ ಸಿಲುಕ್ಕಿದ್ದ 22 ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಕಾಂಗೋ ಗಣರಾಜ್ಯದಲ್ಲಿ ಶಾಂತಿ ಪಾಲನೆಗಾಗಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯೂ ಆಂತರಿಕ ಗಲಭೆ ಪೀಡಿತ ನ್ಯಾಬಿವೊಂಡೋ ಪ್ರಾಂತ್ಯದಲ್ಲಿ ಬಂಡುಕೋರರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಯೋಧರು ಬಂಡುಕೋರರಿಂದ ಶಸ್ತ್ರಾಸ್ತ್ರ ತರಬೇತಿ ಪಡೆಯುತ್ತಿದ್ದ 22 ಮಕ್ಕಳನ್ನು ರಕ್ಷಿಸಿ ಕರೆತಂದಿದ್ದು ಭಾರತೀಯ ಯೋಧರ ಸಾಹಸವನ್ನು ಇಡೀ ಜಗತ್ತೇ ನಿಬ್ಬೆರಗಾಗಿ ನೋಡುತ್ತಿದೆ. 
ಕಾಂಗೋದಲ್ಲಿ ಬಂಡುಕೋರರು ಸಾವಿರಾರು ಮಂದಿ ನಾಗರಿಕರನ್ನು ಹತ್ಯೆ ಮಾಡಿದ್ದಾರೆ. ಇತರ ಕ್ರೂರ ಉಗ್ರರಿಗೆ ಯಾವುದೇ ಸುಳಿವೇ ಇಲ್ಲದಂತೆ ಒಮ್ಮೆಲೆ ದಾಳಿ ನಡೆಸಿ 16 ಗಂಡು ಹಾಗೂ 8 ಹೆಣ್ಣು ಮಕ್ಕಳನ್ನು ರಕ್ಷಿಸಿದ್ದಾರೆ. ಇಷ್ಟು ಮಾತ್ರವಲ್ಲ ಬಂಡುಕೋರರ ಹಿಡಿತದಲ್ಲಿದ್ದ ಅಮಾಯಕರನ್ನೂ ರಕ್ಷಿಸುವಲ್ಲಿ ಸೇನಾಪಡೆ ಸಂಪೂರ್ಣವಾಗಿ ಯಶಸ್ವಿಯಾಗಿದೆ. 
ಭಾರತದ ಮತ್ತೊಂದು ತುಕಡಿಯು ಬಂಡುಕೋರರ ಹಿಡಿತಕ್ಕೆ ಪಡೆಯಲು ಯತ್ನಿಸುತ್ತಿದ್ದ ಮಿರ್ಕಿ ಎಂಬ ಹಳ್ಳಿಯಲ್ಲಿದ್ದ ಸುಮಾರು 200 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT