ಚಾಮುಂಡಾ ಮಾತಾಜಿ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ರಾಹುಲ್ ಗಾಂಧಿ 
ದೇಶ

ದೇವಾಲಯಗಳಿಗೆ ರಾಹುಲ್ ಗಾಂಧಿ ಭೇಟಿ : ರಾಜಕೀಯ ಲೇಪ ಹಚ್ಚಬೇಡಿ- ಕಾಂಗ್ರೆಸ್

ಮೂರು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇವಾಲಯಗಳಿಗೆ ಭೇಟಿ ನೀಡಿರುವುದಕ್ಕೆ ರಾಜಕೀಯ ಲೇಪ ಹಚ್ಚುವ ಅಗತ್ಯವಿಲ್ಲ ...

ನವದೆಹಲಿ: ಮೂರು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇವಾಲಯಗಳಿಗೆ ಭೇಟಿ ನೀಡಿರುವುದಕ್ಕೆ ರಾಜಕೀಯ ಲೇಪ ಹಚ್ಚುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.
ರಾಹುಲ್ ದೇವಾಲಯಗಳ ಭೇಟಿಯ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ನೀವು ಭಾವಿಸುವುದಿಲ್ಲ, ಬೇರೆ ಬೇರೆ ಕಾರಣಗಳಿಗಾಗಿ ಅವರು ಗುಜರಾತ್ ಭೇಟಿ ನೀಡಿದ್ದಾರೆ, ಅದರ ಬಗ್ಗೆ ನಾವು ಗಮನ ನೀಡೋಣ ಎಂದು ಕಾಂಗ್ರೆಸ್ ವಕ್ತಾರ ಪಿ.ಚಿದಂಬರಂ ಹೇಳಿದ್ದಾರೆ.
ಗುಜರಾತ್ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಿದಂಬರಂ, ಪ್ರತಿಯೊಬ್ಬ ರಾಜಕಾರಣಿ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ದೇವಾಲಯಗಳಿಗೆ ತೆರಳುತ್ತಾರೆ, ಜೊತೆಗೆ ವಿವಿಧ ಸ್ಥಳಗಳಿಗೆ ಹಾಗೂ ದೇವಾಲಯಗಳಿಗೆ ಅವರ ಬೆಂಬಲಿಗರ ಒತ್ತಾದ ಮೇರೆಗೆ ಭೇಟಿ ನೀಡುತ್ತಾರೆ, ಪ್ರತಿಯೊಬ್ಬರ ನಂಬಿಕೆ ಮತ್ತು ಆಚರಣೆಗಳನ್ನು ನಾವು ಸಮಾನವಾಗಿ ಗೌರವಿಸುವುದು ಕಾಂಗ್ರೆಸ್ ಪಕ್ಷದ ಹೃದಯ ಶ್ರೀಮಂತಿಕೆಯಾಗಿದೆ. 
ಜವಹರ್ ಲಾಲ್ ನೆಹರು, ಇಂದಿರಾ ಗಾಂಧಿ, ಇರುವಾಗಿನಿಂದಾಗಲೂ ಈ ಪದ್ಧತಿ ಪಾಲಿಸಿಕೊಂಡು ಬರಲಾಗುತ್ತಿದೆ ಎಂದ ಅವರು, ಗುಜರಾತಿನ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದು ಹಿಂದೂ ಮತದಾರರ ಓಲೈಕೆಗಾಗಿ ಮಾಡುತ್ತಿರುವ ಪ್ರಯತ್ನ ಎಂಬ ಆರೋಪವನ್ನು ತಳ್ಳಿ ಹಾಕಿದರು. 
ರಾಜ್ಯದ ಯಾವುದಾದರೊಂದು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯ ರಾಜಕಾರಣಿಗಳ ಒತ್ತಾಯದ ಮೇರೆಗೆ ದೇವಾಲಯ, ಮಸೀದಿ ಮತ್ತು ಚರ್ಚ್ ಗೆ ಭೇಟಿ ನೀಡುವುದು ಅನಿವಾರ್ಯವಾಗತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!