ಚಾಮುಂಡಾ ಮಾತಾಜಿ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ರಾಹುಲ್ ಗಾಂಧಿ 
ದೇಶ

ದೇವಾಲಯಗಳಿಗೆ ರಾಹುಲ್ ಗಾಂಧಿ ಭೇಟಿ : ರಾಜಕೀಯ ಲೇಪ ಹಚ್ಚಬೇಡಿ- ಕಾಂಗ್ರೆಸ್

ಮೂರು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇವಾಲಯಗಳಿಗೆ ಭೇಟಿ ನೀಡಿರುವುದಕ್ಕೆ ರಾಜಕೀಯ ಲೇಪ ಹಚ್ಚುವ ಅಗತ್ಯವಿಲ್ಲ ...

ನವದೆಹಲಿ: ಮೂರು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇವಾಲಯಗಳಿಗೆ ಭೇಟಿ ನೀಡಿರುವುದಕ್ಕೆ ರಾಜಕೀಯ ಲೇಪ ಹಚ್ಚುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.
ರಾಹುಲ್ ದೇವಾಲಯಗಳ ಭೇಟಿಯ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ನೀವು ಭಾವಿಸುವುದಿಲ್ಲ, ಬೇರೆ ಬೇರೆ ಕಾರಣಗಳಿಗಾಗಿ ಅವರು ಗುಜರಾತ್ ಭೇಟಿ ನೀಡಿದ್ದಾರೆ, ಅದರ ಬಗ್ಗೆ ನಾವು ಗಮನ ನೀಡೋಣ ಎಂದು ಕಾಂಗ್ರೆಸ್ ವಕ್ತಾರ ಪಿ.ಚಿದಂಬರಂ ಹೇಳಿದ್ದಾರೆ.
ಗುಜರಾತ್ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಿದಂಬರಂ, ಪ್ರತಿಯೊಬ್ಬ ರಾಜಕಾರಣಿ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ದೇವಾಲಯಗಳಿಗೆ ತೆರಳುತ್ತಾರೆ, ಜೊತೆಗೆ ವಿವಿಧ ಸ್ಥಳಗಳಿಗೆ ಹಾಗೂ ದೇವಾಲಯಗಳಿಗೆ ಅವರ ಬೆಂಬಲಿಗರ ಒತ್ತಾದ ಮೇರೆಗೆ ಭೇಟಿ ನೀಡುತ್ತಾರೆ, ಪ್ರತಿಯೊಬ್ಬರ ನಂಬಿಕೆ ಮತ್ತು ಆಚರಣೆಗಳನ್ನು ನಾವು ಸಮಾನವಾಗಿ ಗೌರವಿಸುವುದು ಕಾಂಗ್ರೆಸ್ ಪಕ್ಷದ ಹೃದಯ ಶ್ರೀಮಂತಿಕೆಯಾಗಿದೆ. 
ಜವಹರ್ ಲಾಲ್ ನೆಹರು, ಇಂದಿರಾ ಗಾಂಧಿ, ಇರುವಾಗಿನಿಂದಾಗಲೂ ಈ ಪದ್ಧತಿ ಪಾಲಿಸಿಕೊಂಡು ಬರಲಾಗುತ್ತಿದೆ ಎಂದ ಅವರು, ಗುಜರಾತಿನ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದು ಹಿಂದೂ ಮತದಾರರ ಓಲೈಕೆಗಾಗಿ ಮಾಡುತ್ತಿರುವ ಪ್ರಯತ್ನ ಎಂಬ ಆರೋಪವನ್ನು ತಳ್ಳಿ ಹಾಕಿದರು. 
ರಾಜ್ಯದ ಯಾವುದಾದರೊಂದು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯ ರಾಜಕಾರಣಿಗಳ ಒತ್ತಾಯದ ಮೇರೆಗೆ ದೇವಾಲಯ, ಮಸೀದಿ ಮತ್ತು ಚರ್ಚ್ ಗೆ ಭೇಟಿ ನೀಡುವುದು ಅನಿವಾರ್ಯವಾಗತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT