ಚಿದಂಬರಂ 
ದೇಶ

ಸರ್ಕಾರಕ್ಕೆ ಸಂಕಷ್ಟದ ದಿನ ಎದುರಾದಾಗಲೆಲ್ಲಾ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕಾಗುತ್ತದೆ: ಚಿದಂಬರಂ ವ್ಯಂಗ್ಯ

ಭಾರತ–ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಾಗಾ ಬಂಡುಕೋರರ ಮೇಲೆ ತೀವ್ರ ಗುಂಡಿನ ದಾಳಿ ನಡೆಸಿದೆ ಎಂಬ ಸರ್ಕಾರದ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಇಂತಹ....

ನವದೆಹಲಿ: ಭಾರತ–ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಾಗಾ ಬಂಡುಕೋರರ ಮೇಲೆ ತೀವ್ರ ಗುಂಡಿನ ದಾಳಿ ನಡೆಸಿದೆ ಎಂಬ ಸರ್ಕಾರದ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ತಿಳಿಸಿದೆ.
ಹಿರಿಯ ಕಾಂಗ್ರೆಸ್ಸಿಗ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕೇಂದ್ರ ಸರ್ಕಾರದ ಹೇಳಿಕೆ ಬಗ್ಗೆ ಮಾತನಾಡಿದ್ದು, ಸರ್ಕಾರಕ್ಕೆ ಸಂಕಷ್ಟದ ಸಂದರ್ಭ ಎದುರಾದಾಗಲೆಲ್ಲಾ ಅವರು ಒಂದೊಂದು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಿರುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. 
ಗಡಿ ಪ್ರದೇಶದಲ್ಲಿ ನಮ್ಮ ಪಡೆಗಳು ಹಾಗೂ ಶತ್ರು ಪಡೆಗಳ ನಡುವೆ ಗುಂಡಿನ ದಾಳಿ ನಡೆಯುತ್ತಲೇ ಇರುತ್ತದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ನಾನು ಗೃಹ ಸಚಿವನಾಗಿದ್ದಾಗಲೂ ಸಹ ಇಂತಹ ಘಟನೆಗಳು ನಡೆದಿತ್ತು.  ನನಗಿಂತ ಹಿಂದೆ ಗೃಹ ಸಚಿವರಾಗಿದ್ದ ಎಲ್.ಕೆ ಅಡ್ವಾಣಿ ಅವರನ್ನು ಕೇಳಿದರೆ ಅವರೂ ಇದನ್ನೇ ಹೇಳುತ್ತಾರೆ. ಯುಪಿಎ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಸುಶೀಲ್ ಕುಮಾರ್ ಶಿಂಧೆ ಅವರನ್ನು ಕೇಳಿದರೆ ಅವರೂ ಇದನ್ನೇ ಹೇಳುತ್ತಾರೆ. ಆದರೆ ಈ ಸರ್ಕಾರಕ್ಕೆ ಸಂಕಷ್ಟದ ಸಮಯ ಬಂದಾಗಲೆಲ್ಲಾ ಅವರಿಗೆ ಎಲ್ಲಾದರೂ ಒಂದು ಕಡೆ ಸರ್ಜಿಕಲ್ ಸ್ಟ್ರೈಕ್ ಮಾಡಬೇಕಾಗುತ್ತದೆ, ಎನ್ ಡಿಎ ಸರ್ಕಾರ ಬಂದ ನಂತರ ಈ ದೇಶದಲ್ಲಿ ಪ್ರತಿಯೊಂದೂ ಸರ್ಜಿಕಲ್ ಸ್ಟ್ರೈಕ್ ಆಗಿದೆ ಎಂದು ಚಿದಂಬರಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT