ಘಟನಾ ಸ್ಥಳದಲ್ಲಿರುವ ಜನ 
ದೇಶ

ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ: 22 ಸಾವು, 30 ಜನರಿಗೆ ಗಾಯ

ವಾಣಿಜ್ಯ ನಗರಿ ಮುಂಬೈನಲ್ಲಿ ಎಲ್'ಫಿನ್'ಸ್ಟೋನ್ ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ ಉಂಟಾಗಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ...

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಎಲ್'ಫಿನ್'ಸ್ಟೋನ್ ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ ಉಂಟಾಗಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ. 

ಮುಂಬೈನಲ್ಲಿ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಳೆ ಬಳಿಕ ಇಂದು ಬೆಳಿಗ್ಗೆ 10.30 ಸುಮಾರಿಗೆ ಎಲ್'ಫಿನ್ ಸ್ಟೋನ್ ರೈಲ್ವೇ ನಿಲ್ದಾಣದ ಬಳಿಯಿರುವ ಪಾದಚಾರಿಗಳ ಮೇಲ್ಸೇತುವೆ ಬಳಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ ಸ್ಥಳದಲ್ಲಿ 22 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಘಟನೆ ಬಳಿಕ ವೈದ್ಯಕೀಯ ತಂಡ ಹಾಗೂ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಧಾರಾಕಾರ ಮಳೆಯಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಪಶ್ಚಿಮ ರೈಲ್ವೇ ಅಧಿಕಾರಿಗಳು ಹೇಳಿಕೊಂಡಿದ್ದಾರೆ. 

ಲೋಕಲ್ ರೈಲು ನಿಲ್ದಾಣದಿಂದ ಪ್ರಯಾಣಿಕರು ಮೇಲ್ಸೇತುವೆ ಮೂಲಕ ನಡೆದುಕೊಂಡು ಹೊರ ಹೋಗುತ್ತಿದ್ದ ವೇಳೆ ಕಾಲ್ತುಳಿತ ಉಂಟಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿರುವ ಪ್ರತ್ಯಕ್ಷದರ್ಶಿಯೊಬ್ಬರು, ಮಳೆಯಿಂದಾಗಿ ಸ್ಥಳದಲ್ಲಿ ಸಾಕಷ್ಟು ಸಂಚಾರ ದಟ್ಟಣೆ ಇತ್ತು. ಈ ವೇಳೆ ಮೇಲ್ಸೇತುವೆ ಕುಸಿದು ಬೀಳಲಿದೆ ಎಂಬ ವದಂತಿಗಳು ಹಬ್ಬಿದ್ದವು. ಮೊದಲು ಮೂವರು ಮಹಿಳೆಯರನ್ನು ಕೆಳಗೆ ತಳ್ಳಲಾಗಿತ್ತು. ಬಳಿಕ ಒಬ್ಬರಾದ ಮೇಲೆ ಒಬ್ಬರು ಕೆಳಗೆ ಬೀಳಲು ಆರಂಭವಾಗಿತ್ತು. ಇದರಂತೆ ಸ್ಥಳದಲ್ಲಿ ಕಾಲ್ತುಳಿತ ಎದುರಾಗಿತ್ತು ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!