ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಹಾಗೂ ಅವರ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ 
ದೇಶ

ಹನಿಪ್ರೀತ್'ಗಾಗಿ ತೀವ್ರಗೊಂಡ ಹುಡುಕಾಟ: ಬಿಕಾನೆರ್ 6 ಪ್ರದೇಶಗಳಲ್ಲಿ ಪೊಲೀಸರ ದಾಳಿ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಎಂದು ಸಾಬೀತಾದ ಬಳಿಕ ಜೈಲುಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ರನ್ನು ಬಂಧನಕ್ಕೊಳಪಡಿಸಲು ಹರಿಯಾಣ ಪೊಲೀಸರು ಹರಸಾಹಸ ಪಡುತ್ತಿದ್ದು...

ಬಿಕಾನೆರ್: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಎಂದು ಸಾಬೀತಾದ ಬಳಿಕ ಜೈಲುಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ರನ್ನು ಬಂಧನಕ್ಕೊಳಪಡಿಸಲು ಹರಿಯಾಣ ಪೊಲೀಸರು ಹರಸಾಹಸ ಪಡುತ್ತಿದ್ದು, ಬಿಕಾನೆರ್'ನ 6 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಪಂಚಕುಲದ ಸೆಕ್ಟರ್-3 ಪೊಲೀಸ್ ಠಾಣೆಯ ಅಧಿಕಾರಿಗಳ ತಂಡ ಪಿಲಿಬಂಗಾ, ಲುಂಕರ್ನ್ಸಾರ್, ಶ್ರೀ ಕೊಲಯತ್, ಜಮ್ಸರ್, ಜಗ್ದೆವಾಲಾ ಮತ್ತು ಗುರುಸಾರ್ ಮೊದಿಯಾ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 
ಪೊಲೀಸ್ ಅಧಿಕಾರಿ ಮುಕೇಶ್ ಮಲ್ಹೋತ್ರಾ, ಸರ್ಕನ್ ಇನ್ಸ್ ಪೆಕ್ಟರ್ ಅಮನ್ ಕುಮಾರ್, ಎಸ್ಐ ನರೇಶ್ ಮತ್ತು ಇತರೆ ಮಹಿಳಾ ಅಧಿಕಾರಿಗಳ ಸೇರಿದಂತೆ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 
ಡೇರಾ ಮುಖ್ಯಸ್ಥನ ಅನುಯಾಗಿದ್ದ ರಾಕೇಶ್ ಕುಮಾರ್ ನನ್ನು ಈ ಹಿಂದೆ ಬಂಧನಕ್ಕೊಳಪಡಿಸಲಾಗಿತ್ತು. ವಿಚಾರಣೆ ವೇಳೆ ರಾಮ್ ರಹೀಮ್ ಬಿಕಾನೆರ್ ನಲ್ಲೂ ಆಶ್ರಮ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದ. ಹೀಗಾಗಿ ಹರಿಯಾಣ ಪೊಲೀಸರ ತಂಡ ಸ್ಥಳೀಯರ ನೆರವಿನೊಂದಿಗೆ ಬಿಕಾನೆರ್'ನಲ್ಲಿರುವ ಡೇರಾ ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು ಎಂದು ಮಲ್ಹೋತ್ರಾ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT