ಚೀನಾ ರಾಯಭಾರಿ ಕಚೇರಿಯ ಅಧಿಕಾರಿ 
ದೇಶ

ಹಳೆಯದ್ದನ್ನು ಮರೆಯೋಣ, ಒಟ್ಟಿಗೆ ಮುನ್ನಡೆಯೋಣ: ಭಾರತಕ್ಕೆ ಚೀನಾ ಮನವಿ

ಡೋಕ್ಲಾಮ್ ವಿವಾದದ ವಿಷಯದಲ್ಲಿ ಭಾರತದ ಎದುರು ಮಂಡಿಯೂರಿದ್ದ ಚೀನಾ ಈಗ ಹಿಂದಿನದೆಲ್ಲವನ್ನೂ ಮರೆತುಬಿಡುವಂತೆ ಭಾರತಕ್ಕೆ ಮನವಿ ಮಾಡಿದ್ದು, ಇನ್ನು ಮುಂದೆ ಒಟ್ಟಿಗೆ ಮುನ್ನಡೆಯೋಣ ಎಂಬ ಸಲಹೆ ನೀಡಿದೆ.

ನವದೆಹಲಿ: ಡೋಕ್ಲಾಮ್ ವಿವಾದದ ವಿಷಯದಲ್ಲಿ ಭಾರತದ ಎದುರು ಮಂಡಿಯೂರಿದ್ದ ಚೀನಾ ಈಗ ಹಿಂದಿನದೆಲ್ಲವನ್ನೂ ಮರೆತುಬಿಡುವಂತೆ ಭಾರತಕ್ಕೆ ಮನವಿ ಮಾಡಿದ್ದು, ಇನ್ನು ಮುಂದೆ ಒಟ್ಟಿಗೆ ಮುನ್ನಡೆಯೋಣ ಎಂಬ ಸಲಹೆ ನೀಡಿದೆ.
ಭಾರತದಲ್ಲಿರುವ ಚೀನಾದ ರಾಯಭಾರಿ ಕಚೇರಿಯ ಅಧಿಕಾರಿ ಲುವೊ ಝಾಹೋಯಿಯಿ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿದ್ದು, ಹಿಂದಿನದ್ದನ್ನು ಮರೆತು ಒಟ್ಟಿಗೆ ಮುನ್ನಡೆಯಲು ಭಾರತ-ಚೀನಾಗೆ ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಭಾರತ-ಚೀನಾ ದ್ವಿಪಕ್ಷೀಯ ಸಂಬಂಧದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಇತ್ತೀಚೆಗಷ್ಟೇ ನಡೆದ ಬಿಕ್ಸ್ ಶೃಂಗಸಭೆಯಲ್ಲಿ ಭೇಟಿ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಅವರು ಸಮನ್ವಯ ಹಾಗೂ ಸಹಕಾರದ ಸಂದೇಶವನ್ನು ಸ್ಪಷ್ಟವಾಗಿ ರವಾನೆ ಮಾಡಿದ್ದಾರೆ. ಹಳೆಯದ್ದನ್ನು ಮರೆತು ಇತಿಹಾಸದ ಪುಟಗಳಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಬೇಕಿದೆ ಎಂದು ಚೀನಾ ರಾಯಭಾರಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT