ಚೀನಾ ರಾಯಭಾರಿ ಕಚೇರಿಯ ಅಧಿಕಾರಿ 
ದೇಶ

ಹಳೆಯದ್ದನ್ನು ಮರೆಯೋಣ, ಒಟ್ಟಿಗೆ ಮುನ್ನಡೆಯೋಣ: ಭಾರತಕ್ಕೆ ಚೀನಾ ಮನವಿ

ಡೋಕ್ಲಾಮ್ ವಿವಾದದ ವಿಷಯದಲ್ಲಿ ಭಾರತದ ಎದುರು ಮಂಡಿಯೂರಿದ್ದ ಚೀನಾ ಈಗ ಹಿಂದಿನದೆಲ್ಲವನ್ನೂ ಮರೆತುಬಿಡುವಂತೆ ಭಾರತಕ್ಕೆ ಮನವಿ ಮಾಡಿದ್ದು, ಇನ್ನು ಮುಂದೆ ಒಟ್ಟಿಗೆ ಮುನ್ನಡೆಯೋಣ ಎಂಬ ಸಲಹೆ ನೀಡಿದೆ.

ನವದೆಹಲಿ: ಡೋಕ್ಲಾಮ್ ವಿವಾದದ ವಿಷಯದಲ್ಲಿ ಭಾರತದ ಎದುರು ಮಂಡಿಯೂರಿದ್ದ ಚೀನಾ ಈಗ ಹಿಂದಿನದೆಲ್ಲವನ್ನೂ ಮರೆತುಬಿಡುವಂತೆ ಭಾರತಕ್ಕೆ ಮನವಿ ಮಾಡಿದ್ದು, ಇನ್ನು ಮುಂದೆ ಒಟ್ಟಿಗೆ ಮುನ್ನಡೆಯೋಣ ಎಂಬ ಸಲಹೆ ನೀಡಿದೆ.
ಭಾರತದಲ್ಲಿರುವ ಚೀನಾದ ರಾಯಭಾರಿ ಕಚೇರಿಯ ಅಧಿಕಾರಿ ಲುವೊ ಝಾಹೋಯಿಯಿ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿದ್ದು, ಹಿಂದಿನದ್ದನ್ನು ಮರೆತು ಒಟ್ಟಿಗೆ ಮುನ್ನಡೆಯಲು ಭಾರತ-ಚೀನಾಗೆ ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಭಾರತ-ಚೀನಾ ದ್ವಿಪಕ್ಷೀಯ ಸಂಬಂಧದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಇತ್ತೀಚೆಗಷ್ಟೇ ನಡೆದ ಬಿಕ್ಸ್ ಶೃಂಗಸಭೆಯಲ್ಲಿ ಭೇಟಿ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಅವರು ಸಮನ್ವಯ ಹಾಗೂ ಸಹಕಾರದ ಸಂದೇಶವನ್ನು ಸ್ಪಷ್ಟವಾಗಿ ರವಾನೆ ಮಾಡಿದ್ದಾರೆ. ಹಳೆಯದ್ದನ್ನು ಮರೆತು ಇತಿಹಾಸದ ಪುಟಗಳಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಬೇಕಿದೆ ಎಂದು ಚೀನಾ ರಾಯಭಾರಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ, ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ, AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಘೋಷಣೆ, ಯಾವಾಗಿಂದ ಗೊತ್ತಾ?

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ; Video

SCROLL FOR NEXT