ಸಂಗ್ರಹ ಚಿತ್ರ 
ದೇಶ

ಮುಂಬೈ ರೈಲ್ವೇ ಮೇಲ್ಸೇತುವೆ ದುರಂತ ಹಿನ್ಲಲೆ ದಸರಾ ಆಚರಣೆ ಮಾಡದಿರಲು ರೈಲ್ವೇ ಇಲಾಖೆ ನಿರ್ಧಾರ

ಮುಂಬೈ ಎಲ್ಫಿನ್'ಸ್ಟೋನ್ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಹಿನ್ನಲೆಯಲ್ಲಿ ಈ ಬಾರಿ ರೈಲ್ವೇ ಸಿಬ್ಬಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಲ್ಲಿ ದಸರಾ ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ...

ಮುಂಬೈ: ಮುಂಬೈ ಎಲ್ಫಿನ್'ಸ್ಟೋನ್ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಹಿನ್ನಲೆಯಲ್ಲಿ ಈ ಬಾರಿ ರೈಲ್ವೇ ಸಿಬ್ಬಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಲ್ಲಿ ದಸರಾ ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ. 
ನಿನ್ನೆಯಷ್ಟೇ ದೇಶದಾದ್ಯಂತ ಆಯುಧ ಪೂಜೆಯನ್ನು ಆಚರಿಸಲಾಗಿತ್ತು. ಆಚರಣೆ ಮಧ್ಯೆಯೇ ನಿನ್ನೆ ಎಲ್ಫಿನ್'ಸ್ಟೋನ್ ರೈಲ್ವೇ ನಿಲ್ದಾಣದಲ್ಲಿರುವ ಪಾದಚಾರಿ ಮೇಲ್ಸೇತವೆಯಲ್ಲಿ ಕಾಲ್ತುಳಿತ ಸಂಭವಿಸಿ 22 ಮಂದಿ ಸಾವನ್ನಪ್ಪಿದ್ದರು, ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 
ಈ ಹಿನ್ನಲೆಯಲ್ಲಿ ದಸರಾ ಆಚರಣೆ ಮಾಡದಿರಲು ನಿರ್ಧರಿಸಿದ ರೈಲ್ವೇ ಸಿಬ್ಬಂದಿಗಳು ಕಳೆದ ರಾತ್ರಿ ಕ್ಯಾಂಡಲ್ ಗಳನ್ನು ಹಿಡಿದು ಮೃತಪಟ್ಟವರ ಆತ್ಮಕ್ಕೆ ಶಾಂತಿಯನ್ನು ಕೋರಿದರು. 
ರೈಲ್ವೆ ಇಲಾಖೆ ದಸರಾ ಆಚರಣೆ ಮಾಡದೆ ಇರುವುದನ್ನು ಸ್ವತಃ ರೈಲ್ವೆ ಇಲಾಖೆಯ ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ. ಮೇಲ್ಸೇತುವೆಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನಲೆಯಲ್ಲಿ ಸಿಬ್ಬಂದಿಗಳು ಹಾಗೂ ಕೆಲಸಗಾರಾರೂ ಈ ಬಾರಿ ದಸರಾ ಹಬ್ಬವನ್ನು ಆಚರಣೆ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 
ದುರ್ಘಟನೆಯಿಂದ ನಮ್ಮ ಎಲ್ಲಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ತೀವ್ರವಾಗಿ ಬೇಸರಗೊಂಡಿದ್ದಾರೆ. ಹೀಗಾಗಿ ಸ್ವಾಭಾವಿಕವಾಗಿಯೇ ಎಲ್ಲರೂ ದಸರಾ ಆಚರಿಸದಿರಲು ನಿರ್ಧಾರ ಕೈಗೊಂಡಿದ್ದಾರೆಂದು ಪಶ್ಚಿಮ ರೈಲ್ವೇ ವಿಭಾಗದ ಮುಖ್ಯ ವಕ್ತಾರ ರವೀಂದ್ರ ಭಾಸ್ಕರ್ ಅವರು ಹೇಳಿದ್ದಾರೆ. 
ಕೇಂದ್ರ ರೈಲ್ವೇ ವಿಭಾಗದ ಮುಖ್ಯ ವಕ್ತಾರ ಸುನೀಲ್ ಉದಾಸಿ ಮಾತನಾಡಿ, ಕೇಂದ್ರ ರೈಲ್ವೇ ಸಿಬ್ಬಂದಿಗಳೂ ಕೂಡ ಈ ಬಾರಿ ಹಬ್ಬವನ್ನು ಆಚರಣೆ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಮುಂಬೈನ ಎಲ್'ಫಿನ್'ಸ್ಟೋನ್ ರೈಲ್ವೆ ನಿಲ್ದಾಣದ ಬಳಿ ಇರುವ ಪಾದಚಾರಿಗಳ ಮೇಲ್ಸೇತುವೆಯಲ್ಲಿ ದುರ್ಘಟನೆಯೊಂದು ಸಂಭವಿಸಿತ್ತು. ಮೇಲ್ಸೇತುವೆ ಕುಸಿದು ಬೀಳಲಿದೆ ಎಂಬ ವದಂತಿಗಳಿಗೆ ಕಿವಿಗೊಟ್ಟಿದ್ದ ಸ್ಥಳೀಯರು ಆತಂಕಗೊಂಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 22 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT