ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

'ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲಿಗೆ ಅವಕಾಶ': ರಾಜ್ ಠಾಕ್ರೆ

ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲು ಅಭಿವೃದ್ಧಿ ಕುರಿತ ಕಾರ್ಯಗಳಿಗೆ ಅವಕಾಶ ನೀಡುತ್ತೇವೆಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆಯವರು ಶನಿವಾರ ಹೇಳಿದ್ದಾರೆ...

ಮುಂಬೈ: ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲು ಅಭಿವೃದ್ಧಿ ಕುರಿತ ಕಾರ್ಯಗಳಿಗೆ ಅವಕಾಶ ನೀಡುತ್ತೇವೆಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆಯವರು ಶನಿವಾರ ಹೇಳಿದ್ದಾರೆ.

ಮುಂಬೈ ಎಲ್ಫಿನ್'ಸ್ಟೋನ್ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲು ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. 
ಮುಂಬೈನಲ್ಲಿ ಮಳೆಯಾಗುತ್ತಿರುವುದು ಇದು ಮೊದಲನೇನಲ್ಲ. ಭಾರೀ ಮಳೆಯಿಂದಾಗಿ ದುರಂತ ಸಂಭವಿಸಿದೆ ಎಂದು ರೈಲ್ವೇ ಅಧಿಕಾರಿಗಳು ಹೇಳುತ್ತಿದ್ದಾರೆ. ಪ್ರಸ್ತುತ ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸದ ಹೊರತು ಬುಲೆಟ್ ರೈಲು ಕುರಿತ ಕಾರ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ರೈಲ್ವೇ ಇಲಾಖೆ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಅವರು, ನಮಗೆ ಉಗ್ರರು ಹಾಗೂ ಪಾಕಿಸ್ತಾನದಂತಹ ಶತ್ರುಗಳ ಅಗತ್ಯವೇನಿದೆ? ಜನರನ್ನು ಸಾಯಿಸಲು ರೈಲ್ವೇ ಇಲಾಖೆಯೇ ಸಾಕು ಎಂದಿದ್ದಾರೆ.

ಮುಂಬೈ ಸ್ಥಳೀಯ ರೈಲುಗಳ ಕುರಿತಂತೆ ಹಾಗೂ ರೈಲ್ವೇ ನಿಲ್ದಾಣಗಳ ಸಮಸ್ಯೆಗಳ ಕುರಿತಂತೆ ಪಟ್ಟಿಯೊಂದನ್ನು ಅಂತಿಮ ಗಡುವಿನ ದಿನಾಂಕದೊಂದಿಗೆಯೇ ಅ.5 ರಂದು ನೀಡಲಾಗುತ್ತದೆ. ಒಂದು ವೇಳೆ ಇಲಾಖೆ ಕ್ರಮ ಕೈಗೊಳ್ಳದೇ ಹೋಗಿದ್ದೇ ಆದರೆ, ನಾವು ನಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆಯನ್ನು ನೀಡುತ್ತೇವೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT