ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

'ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲಿಗೆ ಅವಕಾಶ': ರಾಜ್ ಠಾಕ್ರೆ

ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲು ಅಭಿವೃದ್ಧಿ ಕುರಿತ ಕಾರ್ಯಗಳಿಗೆ ಅವಕಾಶ ನೀಡುತ್ತೇವೆಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆಯವರು ಶನಿವಾರ ಹೇಳಿದ್ದಾರೆ...

ಮುಂಬೈ: ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲು ಅಭಿವೃದ್ಧಿ ಕುರಿತ ಕಾರ್ಯಗಳಿಗೆ ಅವಕಾಶ ನೀಡುತ್ತೇವೆಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆಯವರು ಶನಿವಾರ ಹೇಳಿದ್ದಾರೆ.

ಮುಂಬೈ ಎಲ್ಫಿನ್'ಸ್ಟೋನ್ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲು ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. 
ಮುಂಬೈನಲ್ಲಿ ಮಳೆಯಾಗುತ್ತಿರುವುದು ಇದು ಮೊದಲನೇನಲ್ಲ. ಭಾರೀ ಮಳೆಯಿಂದಾಗಿ ದುರಂತ ಸಂಭವಿಸಿದೆ ಎಂದು ರೈಲ್ವೇ ಅಧಿಕಾರಿಗಳು ಹೇಳುತ್ತಿದ್ದಾರೆ. ಪ್ರಸ್ತುತ ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸದ ಹೊರತು ಬುಲೆಟ್ ರೈಲು ಕುರಿತ ಕಾರ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ರೈಲ್ವೇ ಇಲಾಖೆ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಅವರು, ನಮಗೆ ಉಗ್ರರು ಹಾಗೂ ಪಾಕಿಸ್ತಾನದಂತಹ ಶತ್ರುಗಳ ಅಗತ್ಯವೇನಿದೆ? ಜನರನ್ನು ಸಾಯಿಸಲು ರೈಲ್ವೇ ಇಲಾಖೆಯೇ ಸಾಕು ಎಂದಿದ್ದಾರೆ.

ಮುಂಬೈ ಸ್ಥಳೀಯ ರೈಲುಗಳ ಕುರಿತಂತೆ ಹಾಗೂ ರೈಲ್ವೇ ನಿಲ್ದಾಣಗಳ ಸಮಸ್ಯೆಗಳ ಕುರಿತಂತೆ ಪಟ್ಟಿಯೊಂದನ್ನು ಅಂತಿಮ ಗಡುವಿನ ದಿನಾಂಕದೊಂದಿಗೆಯೇ ಅ.5 ರಂದು ನೀಡಲಾಗುತ್ತದೆ. ಒಂದು ವೇಳೆ ಇಲಾಖೆ ಕ್ರಮ ಕೈಗೊಳ್ಳದೇ ಹೋಗಿದ್ದೇ ಆದರೆ, ನಾವು ನಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆಯನ್ನು ನೀಡುತ್ತೇವೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT