ಮುಂಬೈ ಪಾದಚಾರಿ ಮೇಲ್ಸೇತುವೆ ದುರಂತ 
ದೇಶ

ಮುಂಬೈ ಪಾದಚಾರಿ ಮೇಲ್ಸೇತುವೆ ದುರಂತ: ಪುನರ್'ನಿರ್ಮಾಣಕ್ಕೆ 2015ರಲ್ಲಿಯೇ ಹಣ ಬಿಡುಗಡೆ ಮಾಡಿದ್ದ ಸುರೇಶ್ ಪ್ರಭು

22 ಜನರ ಮಾರಣಹೋಮಕ್ಕೆ ಕಾರಣವಾಗಿದ್ದ ಮುಂಬೈ ಪಾದಚಾರಿ ಮೇಲ್ಸೇತುವೆ ಪುನರ್ ನಿರ್ಮಾಣಕ್ಕಾಗಿ ಮಾಜಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ರೂ.11.86 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು...

ನವದೆಹಲಿ: 22 ಜನರ ಮಾರಣಹೋಮಕ್ಕೆ ಕಾರಣವಾಗಿದ್ದ ಮುಂಬೈ ಪಾದಚಾರಿ ಮೇಲ್ಸೇತುವೆ ಪುನರ್ ನಿರ್ಮಾಣಕ್ಕಾಗಿ ಮಾಜಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ರೂ.11.86 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು ಎಂದು ವರದಿಗಳು ತಿಳಿಸಿವೆ. 

ನಿನ್ನೆಯಷ್ಟೇ ಮುಂಬೈನ ಎಲ್'ಫಿನ್'ಸ್ಟೋನ್ ರೈಲ್ವೆ ನಿಲ್ದಾಣದ ಬಳಿ ಇರುವ ಪಾದಚಾರಿಗಳ ಮೇಲ್ಸೇತುವೆಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಮೇಲ್ಸೇತುವೆ ಕುಸಿದು ಬೀಳಲಿದೆ ಎಂಬ ವದಂತಿಗಳಿಗೆ ಕಿವಿಗೊಟ್ಟಿದ್ದ ಸ್ಥಳೀಯರು ಆತಂಕಗೊಂಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 22 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿದ್ದರು. 

ಮೇಲ್ಸೇತುವೆ ದುರ್ಬಲವಾಗಿದೆ ಎಂದು 2015 ರಲ್ಲೇ ಕೇಂದ್ರ ರೈಲ್ವೆ ಹೇಳಿತ್ತು. ಸ್ಥಳೀಯರೂ ಸಹ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ದುರಂತ ಒಂದಲ್ಲಾ ಒಂದು ದಿನ ಸಂಭವಿಸುವುದು ನಿಶ್ಚಿತ ಎಂಬ ಆತಂಕದಲ್ಲಿಯೇ ಇದ್ದರು. ಇದಲ್ಲದೆ ಹಲವರು ಮೇಲ್ಸೇತುವೆ ಕುರಿತಂತೆ ಹಲವು ಬಾರಿ ಅಧಿಕಾರಿಗಳಿಗೆ ದೂರುಗಳನ್ನೂ ನೀಡಿದ್ದಾರೆ. 

ಕೆಲ ಮೂಲಗಳು ಮಾಹಿತಿ ನೀಡಿರುವ ಪ್ರಕಾರ, ಮೇಲ್ಸೇತುವೆ ಕುರಿತಂತೆ ಬಂದಿದ್ದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಅಂದಿನ ರೈಲ್ವೇ ಸಚಿವ ಸುರೇಶ್ ಪ್ರಭು ಅವರು 2015ರಲ್ಲಿಯೇ ಮೇಲ್ಸೇತುವೆ ಪುನರ್ ನಿರ್ಮಾಣ ಮಾಡುವುದಕ್ಕಾಗಿ, ಸೇತುವೆ ಅಗಲೀಕರಣ ಮಾಡುವುದಕ್ಕಾಗಿ ರೂ.11.86 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು ಎಂದು ತಿಳಿದುಬಂದಿದೆ. 

ಫೆ.20. 2016 ಮುಂಬೈನ ಶಿವಸೇನಾ ಸಂಸದ ಅರವಿಂದ್ ಸಾವಂತ್ ಅವರಿಗೆ ಸುರೇಶ್ ಪ್ರಭು ಅವರು ಪತ್ರವೊಂದರನ್ನು ಬರೆದಿದ್ದರು. ಎಲ್'ಫಿನ್'ಸ್ಟೋನ್ ರೈಲ್ವೆ ನಿಲ್ದಾಣದ ಬಳಿ 12 ಮೀಟರ್ ನೂತನ ಪಾದಚಾರಿ  ಮೇಲ್ಸೇತುವೆ ನಿರ್ಮಾಣ ಕುರಿತ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣಿಸಿದೆ ಎಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ. ಇದಲ್ಲದೆ, ಉತ್ತರ ವಿಭಾಗದಲ್ಲಿ 100 ಮೀಟರ್ ನಷ್ಟು ಸೇತುವೆ ವಿಸ್ತರಣೆಯನ್ನು ಪರಿಗಣಿಸಿರುವುದಾಗಿ ಇಲಾಖೆ ತಿಳಿಸಿರುವುದು ಪತ್ರದಲ್ಲಿ ಕಂಡು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT