ಮೋಹನ್ ಭಾಗವತ್ 
ದೇಶ

ಗೋವುಗಳ ರಕ್ಷಣೆಗೆ ಮುಸ್ಲಿಮರು ಕೂಡ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ: ಮೋಹನ್ ಭಾಗವತ್

ಹಸುಗಳ ರಕ್ಷಣೆ ಮಾಡುವುದು ಸಂವಿಧಾನದಲ್ಲೇ ಉಲ್ಲೇಖವಾಗಿದೆ, ಅದು ಯಾವುದೇ ಧರ್ಮದ ವಿಷಯವಲ್ಲ, ಎಷ್ಟು ಮಂದಿ ಮುಸ್ಲಿಮರು ಗೋವುಗಳ ರಕ್ಷಣೆಯಲ್ಲಿ ..

ಮುಂಬಯಿ: ಹಸುಗಳ ರಕ್ಷಣೆ ಮಾಡುವುದು ಸಂವಿಧಾನದಲ್ಲೇ ಉಲ್ಲೇಖವಾಗಿದೆ, ಅದು ಯಾವುದೇ ಧರ್ಮದ ವಿಷಯವಲ್ಲ, ಎಷ್ಟು ಮಂದಿ ಮುಸ್ಲಿಮರು ಗೋವುಗಳ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದು ನನಗೆ ತಿಳಿದಿದೆ. ಹಲವು ಮುಸ್ಲಿಮರು ಗೋವುಗಳ ರಕ್ಷಣೆಗೆ ತಮ್ಮ ಪ್ರಾಣ ನೀಡಿದ್ದಾರೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮುಂಬಯಿಯಲ್ಲಿ, ವಿಜಯ ದಶಮಿ ಅಂಗವಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೋರಕ್ಷಕರು ಯಾವುದೇ ಕಾರಣಕ್ಕೂ ಕಾನೂನನ್ನು ಉಲ್ಲಂಘಿಸಬಾರದು, ಹಾಗೆಯೇ ಜನಗಳು ಧರ್ಮವನ್ನು ಪರಿಗಣಿಸದೇ ಗೋವುಗಳನ್ನು ರಕ್ಷಿಸಬೇಕು ಎಂದು ಕರೆ ನೀಡಿದ್ದಾರೆ.
ಗೋರಕ್ಷಣೆ ಮಾಡುವಾಗ ಹಲವು ಜನರನ್ನು ಗೋರಕ್ಷಕರು ಕೊಂದಿರುವುದು ಖಂಡನೀಯ ಹಾಗೆಯೇ, ಹಸು ಕಳ್ಳ ಸಾಗಣೆದಾರರಿಂದ ಹಲವರು ಸಾವನ್ನಪ್ಪಿದ್ದಾರೆ, ಧರ್ಮವನ್ನು ಮೀರಿ ನಾವು ಹಸುಗಳ ರಕ್ಷಣೆ ಮಾಡಬೇಕು ಎಂದು ಹೇಳಿದ್ದಾರೆ.
ದೇಶದಲ್ಲಿ ಹಸುಗಳನ್ನು ಹಾಲು ಮತ್ತು ಅದರ ಮೂತ್ರಕ್ಕೆ ಬಳಸಲಾಗುತ್ತದೆ. ಸಣ್ಣ  ರೈತರು ತಮ್ಮ ಜೀವನೋಪಾಯಕ್ಕಾಗಿ ಹಸು ಸಾಕುತ್ತಾರೆ, ಹಸುಗಳ ರಕ್ಷಣೆ ಹಾಗೂ ಹಸು ಆಧಾರಿತ ಕೃಷಿಯನ್ನು ಸಂರಕ್ಷಿಸಬೇಕೆಂದು ಸಂವಿಧಾನದಲ್ಲೇ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT