ನರೇಂದ್ರ ಮೋದಿ 
ದೇಶ

ಕೆಂಪು ಕೋಟೆಯ ದಸರಾ ಆಚರಣೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ

ಸೆ.30 ರಂದು ವಿಜಯದಶಮಿಯ ಅಂಗವಾಗಿ ಕೆಂಪು ಕೋಟೆಯಲ್ಲಿ ದಸರಾ ಆಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನವದೆಹಲಿ: ಸೆ.30 ರಂದು ವಿಜಯದಶಮಿಯ ಅಂಗವಾಗಿ ಕೆಂಪು ಕೋಟೆಯಲ್ಲಿ ದಸರಾ ಆಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 
ವಿಜಯದಶಮಿಯ ಅಂಗವಾಗಿ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕೆಟ್ಟದ್ದರ ವಿರುದ್ಧ ಒಳ್ಳೆಯದು ಗೆದ್ದ ಸಂಕೇತವಾಗಿ ಆಚರಿಸುವ ವಿಜಯದಶಮಿ ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. 
2014 ರ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ನಡೆಯುತ್ತಿರುವ ದಸರಾ ಆಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ. 2015 ರ ದಸರಾ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿಗೆ ಶಿಲಾನ್ಯಾಸ ನೆರವೇರಿಸಲು ತೆರಳಿದ್ದರು. 2016 ರಲ್ಲಿ ಲಖನೌ ನಲ್ಲಿ ದಸರಾ ಆಚರಣೆ ಮಾಡಿದ್ದರು. 
ವರದಿಗಳ ಪ್ರಕಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ದಸರಾ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT