ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ರೊಹಿಂಗ್ಯಾ ಮುಸ್ಲಿಮರು ಅಕ್ರಮ ವಲಸಿಗರೇ ಹೊರತು ನಿರಾಶ್ರಿತರಲ್ಲ: ಸಿಎಂ ಯೋಗಿ ಆದಿತ್ಯನಾಥ್

ರೊಹಿಂಗ್ಯಾಮುಸ್ಲಿಮರು ಅಕ್ರಮ ವಲಸಿಗರೇ ಹೊರತು ನಿರಾಶ್ರಿತರಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ...

ಲಖನೌ: ರೊಹಿಂಗ್ಯಾಮುಸ್ಲಿಮರು ಅಕ್ರಮ ವಲಸಿಗರೇ ಹೊರತು ನಿರಾಶ್ರಿತರಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. 
ಗೋರಖ್ಪುರದಲ್ಲಿ ನಡೆದ ಕನ್ಯಾ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರೊಹಿಂಗ್ಯಾ ವಿವಾದ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ರೊಹಿಂಗ್ಯಾ ಮುಸ್ಲಿಮರು ಅಕ್ರಮ ವಲಸಿಗರೇ ಹೊರತು ನಿರಾಶ್ರಿತರಲ್ಲ ಎಂದು ಹೇಳಿತ್ತು. ಮ್ಯಾನ್ಮಾರ್ ನಲ್ಲಿ ಸಾಕಷ್ಟು ಮುಗ್ದ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದೆ. ರೊಹಿಂಗ್ಯಾರಿಗೆ ಉಗ್ರರ ನಂಟು ಇರುವುದಾಗಿಯೂ ಹೇಳಲಾಗುತ್ತಿದೆ. ರೊಹಿಂಗ್ಯಾ ಮುಸ್ಲಿಮರನ್ನು ನಿರಾಶ್ರಿತರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಪರಿಸ್ಥಿತಿ ಹೀಗಿರುವಾಗ ರೊಹಿಂಗ್ಯಾ ಮುಸ್ಲಿಮರ ಕುರಿತಂತೆ ದೇಶದಲ್ಲಿ ಕಾಳಜಿ ಹಾಗೂ ಸಹಾನುಭೂತಿಗಳು ವ್ಯಕ್ತವಾಗುತ್ತಿರುವುದನ್ನು ನೋಡಿದರೆ ಬೇಸರ ಹಾಗೂ ಆಕ್ರೋಶ ವ್ಯಕ್ತವಾಗುತ್ತದೆ. 
ಇದೇ ವೇಳೆ ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು, ಪ್ರಕರಣ ಜನರ ಧಾರ್ಮಿಕ ನಂಬಿಕೆಗಳಿಗೆ ಸಂಬಂಧಿಸಿತ್ತು. ನ್ಯಾಯಾಲಯದ ತೀರ್ಪು ಹೊರಬರುವವರೆಗೂ ಕಾಯಬೇಕು. ಅಯೋಧ್ಯೆ ಪವಿತ್ರ ನಗರವಾಗಿದ್ದು, ಸತಾತನ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಅಯೋಧ್ಯೆಯಲ್ಲಿ ಈ ಬಾರಿ ದೀಪಾವಳಿ ಹಬ್ಬವನ್ನು ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಹಬ್ಬದ ಆಚರಣೆ ಕಾರ್ಯಕ್ರಮಗಳ ಕುರಿತಂತೆ ಅಕ್ಟೋಬರ್ ಮೊದಲ ವಾರ ಮಾಹಿತಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT