ದುರ್ಗಾ ಮೆರವಣಿಗೆ ವೇಳೆ ಅವಘಡ, ದೆಹಲಿಯ ವಿವಿಧೆಡೆ 7 ಮಂದಿ ಜಲಸಮಾಧಿ 
ದೇಶ

ದುರ್ಗಾ ಮೆರವಣಿಗೆ ವೇಳೆ ಅವಘಡ, ದೆಹಲಿಯ ವಿವಿಧೆಡೆ 7 ಮಂದಿ ಜಲಸಮಾಧಿ

ನವರಾತ್ರಿ ಹಬ್ಬದ ಕಡೆಯ ದಿನ, ನಿನ್ನೆ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದೆಹಲಿಯ ವಿವಿಧೆಡೆ ಸಂಭವಿಸಿದ ದುರಂತಗಳಲ್ಲಿ ಏಳು ಮಂದಿ ಜಲ ಸಮಾಧಿಯಾಗಿದ್ದಾರೆ.

ನವದೆಹಲಿ: ನವರಾತ್ರಿ ಹಬ್ಬದ ಕಡೆಯ ದಿನ, ನಿನ್ನೆ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದೆಹಲಿಯ ವಿವಿಧೆಡೆ ಸಂಭವಿಸಿದ ದುರಂತಗಳಲ್ಲಿ ಏಳು ಮಂದಿ ಜಲ ಸಮಾಧಿಯಾಗಿದ್ದಾರೆ. 
ಆರು ಮೃತ ದೇಹಗಳನ್ನು ಈಗಾಗಲೇ  ನೀರಿನಿಂದ ಹೊರ ತೆಗೆಯಲಾಗಿದ್ದು  ಈಶಾನ್ಯ ದೆಹಲಿಯ ಸೋನಿಯಾ ವಿಹಾರದ ಚೌತನ್ ಪಟ್ಟಿಯ ಯಮುನಾ ದಂಡೆಯಲ್ಲಿ ದುರ್ಗಾ ವಿಸರ್ಜನೆ ಸಂದರ್ಭದಲ್ಲಿ 13 ವರ್ಷದ ಬಾಲಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. 
ಬಾಲಕ ಹಿಮಾಂಶು ಮತ್ತು ಆತನ ಸ್ನೇಹಿತ ನೀರಿನಲ್ಲಿ ಕೊಚ್ಚಿ ಹೋಗಿರುವುದಾಗಿ ಶೋಧ ಕಾರ್ಯದಲ್ಲಿ ನಿರತರಾದ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಇನ್ನು ದೆಹಲಿ ಹೊರವಲಯದ ಪಲ್ಲಾ ಬಳಿ ಯಮುನಾ ನದಿಯಲ್ಲಿ ನಡೆಯುತ್ತಿದ್ದ ನವರಾತ್ರಿ  ಉತ್ಸವದಲ್ಲಿ ಭಾಗವಹಿಸಿದ್ದ ನಾಲ್ವರು ಯುವಕರು ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ,  ಜತೆಗೆ ದೆಹಲಿಯ  ಚೌತನ್ ಪಟ್ಟಿಯಲ್ಲಿ ಅಪರಿಚಿತ ಯುವತಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.   
ಇದೇ ಸೆ.3 ರಂದು ಗಣೇಶ ವಿಸರ್ಜನೆ ಸಮಯದಲ್ಲಿ ನಾಲ್ವರು ಯುವಕರು ಯಮುನೆಯಲ್ಲಿ ಜಲಸಮಾಧಿಯಾದ ದುರಂತವನ್ನು ನಾವಿಲ್ಲಿ ನೆನೆಯಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT