ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ 
ದೇಶ

ದೇಶಭಕ್ತಿ ಕುರಿತು ನಮಗೆ ಪಾಠ ಮಾಡಬೇಡಿ, ನಿಮ್ಮ ಹಿಂದುತ್ವ ವಾದವನ್ನು ಸ್ಪಷ್ಟಪಡಿಸಿ: ಬಿಜೆಪಿಗೆ ಶಿವಸೇನೆ

ದೇಶಭಕ್ತಿ ಕುರಿತು ನಮಗೆ ಪಾಠ ಮಾಡುವ ಅಗತ್ಯವಿಲ್ಲ. ದೇಶಭಕ್ತಿ ಕುರಿತು ನಮಗೆ ಪಾಠ ಹೇಳುವ ದಿನಗಳಿನ್ನೂ ಬಂದಿಲ್ಲ, ಮೊದಲು ನಿಮ್ಮ ಹಿಂದುತ್ವ ವಾದದ ಕುರಿತು ಸ್ಪಷ್ಟಪಡಿಸಿ ಎಂದು ಬಿಜೆಪಿಗೆ ಶಿವಸೇನೆ ಹೇಳಿದೆ...

ಮುಂಬೈ: ದೇಶಭಕ್ತಿ ಕುರಿತು ನಮಗೆ ಪಾಠ ಮಾಡುವ ಅಗತ್ಯವಿಲ್ಲ. ದೇಶಭಕ್ತಿ ಕುರಿತು ನಮಗೆ ಪಾಠ ಹೇಳುವ ದಿನಗಳಿನ್ನೂ ಬಂದಿಲ್ಲ, ಮೊದಲು ನಿಮ್ಮ ಹಿಂದುತ್ವ ವಾದದ ಕುರಿತು ಸ್ಪಷ್ಟಪಡಿಸಿ ಎಂದು ಬಿಜೆಪಿಗೆ ಶಿವಸೇನೆ ಹೇಳಿದೆ. 
ಮುಂಬೈನಲ್ಲಿ ನಿನ್ನೆ ನಡೆದ ವಾರ್ಷಿಕ ದಸರಾ ರ್ಯಾಲಿಯಲ್ಲಿ ಮಾತನಾಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ರಾಷ್ಟ್ರ ಪ್ರೇಮ ಕುರಿತು ನಮಗೆ ಪಾಠದ ಅಗತ್ಯವಿಲ್ಲ. ರಾಷ್ಟ್ರಪ್ರೇಮ ಕುರಿತು ನಮಗೆ ಪಾಠ ಮಾಡುವ ದಿನಗಳಿನ್ನೂ ಬಂದಿಲ್ಲ ಎಂದು ಹೇಳಿದ್ದಾರೆ. 
ನೋಟು ನಿಷೇಧದ ಬಳಿಕ ಎದುರಾಗಿರುವ ಬೆಲೆ ಏರಿಕೆ ಕುರಿತಂತೆ ಪಕ್ಷದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಟೀಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವೈಕ್ತಿಗತ ವಾಗ್ದಾಳಿ ಬೇಡ. ಸಮಸ್ಯೆಗಳ ಕುರಿತು ಪಕ್ಷದ ವತಿಯಿಂದಲೇ ಪ್ರತಿಭಟನೆಗಳನ್ನು ನಡೆಸೋಣ. ಎಲ್ಲಾ ಅವ್ಯವಸ್ಥಗಳಿಗೂ ಒಬ್ಬ ವ್ಯಕ್ತಿಯನ್ನೂ ಗುರಿ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. 
ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿದ ಬಳಿಕ ಸಾಕಷ್ಟು ಸಮಸ್ಯೆಗಳು ಎದುರಾಗಿತ್ತು. ಯಾರು ನೋಟು ನಿಷೇಧ ನಿರ್ಧಾರದ ಪರವಾಗಿದ್ದಾರೋ ಅವರೆಲ್ಲರೂ ದೇಶಪ್ರೇಮಿಗಳು ಹಾಗೂ ಯಾರೂ ನಿರ್ಧಾರದ ವಿರುದ್ಧವಿದ್ದಾರೆ ಅವರೆಲ್ಲರೂ ದೇಶದ್ರೋಹಿಗಳು ಎಂಬಂತೆ ಬಣ್ಣಿಸಲಾಗುತ್ತಿತ್ತು ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT