ಕುಟುಂಬ ಸದಸ್ಯನನ್ನು ಕಳೆದುಕೊಂಡು ದುಃಖದಲ್ಲಿ ಸಂಬಂಧಿಕರು 
ದೇಶ

ಮುಂಬೈ ಕಾಲ್ತುಳಿತ ದುರಂತ; ಶವಗಳಿಗೆ ನಂಬರ್ ಹಾಕಿದ್ದ ವೈದ್ಯರ ವಿರುದ್ಧ ಆಕ್ರೋಶ

ವಾಣಿಜ್ಯ ನಗರ ಮುಂಬೈನ ಎಲ್ಫಿನ್'ಸ್ಟೋನ್ ರೈಲು ನಿಲ್ಧಾಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ ಬಲಿಯಾದವರ ಶವಗಳನ್ನಿರಿಸಿದ್ದ ಕೆಇಎಂ ಆಸ್ಪತ್ರೆಯಲ್ಲಿ ವೈದ್ಯರು, ಶವಗಳನ್ನು ಗುರ್ತಿಸುವ ಸಲುವಾಗಿ ಹಣೆಗಳ ಮೇಲೆ ನಂಬರ್ ಹಾಕಿದ್ದಕ್ಕೆ ತೀವ್ರ...

ಮುಂಬೈ: ವಾಣಿಜ್ಯ ನಗರ ಮುಂಬೈನ ಎಲ್ಫಿನ್'ಸ್ಟೋನ್ ರೈಲು ನಿಲ್ಧಾಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ ಬಲಿಯಾದವರ ಶವಗಳನ್ನಿರಿಸಿದ್ದ ಕೆಇಎಂ ಆಸ್ಪತ್ರೆಯಲ್ಲಿ ವೈದ್ಯರು, ಶವಗಳನ್ನು ಗುರ್ತಿಸುವ ಸಲುವಾಗಿ ಹಣೆಗಳ ಮೇಲೆ ನಂಬರ್ ಹಾಕಿದ್ದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ. 
ಶವಗಳ ಹಣೆ ಮೇಲೆ ನಂಬರ್ ಹಾಕಿದ ವೈದ್ಯರ ನಡೆಗೆ ಖಂಡಿಸಿ ವೈದ್ಯರೊಬ್ಬರಿಗೆ ಶಿವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ದಾಳಿ ಕುರಿತೆತ ಪ್ರತಿಕ್ರಿಯೆ ನೀಡಿರುವ ವೈದ್ಯ ಹರಿ ಪಥಕ್ ಎಂಬುವವರು, ಕಳೆದ ರಾತ್ರಿ ಕಚೇರಿಗೆ 5-6 ಮಂದಿಯಿದ್ದ ಗುಂಪೊಂದು ಏಕಾಏಕಿ ದಾಳಿ ನಡೆಸಿತ್ತು. ದಾಳಿ ನಡೆಸಿದವರು ಶಿವಸೇನೆಯ ಸದಸ್ಯರಾಗಿದ್ದಾರೆ. ಕಚೇರಿಯೊಳಗೆ ನುಗ್ಗಿದ ಗುಂಪು ನನ್ನ ಮೇಲೆ ದಾಳಿ ಮಾಡಿತ್ತು. ಈ ವೇಳೆ ಒಬ್ಬ ವ್ಯಕ್ತಿಯ ಬಳಿ ಶಿವಸೇನೆಯ ಸದಸ್ಯತ್ವದ ಗುರುತಿನ ಚೀಟಿ ಇತ್ತು ಎಂದು ಹೇಳಿದ್ದಾರೆ. 
ಶವಗಳ ಹಣೆಗಳ ಮೇಲೆ ನಂಬರ್ ಗಳನ್ನು ಹಾಕಿರುವುದಕ್ಕೆ ಇದೀಗ ಸಂತ್ರಸ್ತರ ಕುಟುಂಬಸ್ಥರೂ ಕೂಡ ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಅಕ್ರೋಶಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಆಸ್ಪತ್ರೆ ಆಡಳಿತ ಮಂಡಳಿ, ಇದೊಂದು ವೈಜ್ಞಾನಿಕ ಕ್ರಮವಾಗಿದೆ. ಮೃತದೇಹಗಳ ಕುರಿತಂತೆ ಉಂಟಾಗುವ ಗೊಂದಲಗಳನ್ನು ನಿವಾರಣೆ ಮಾಡಲು ಹಾಗೂ ಶವಗಳನ್ನು ಗುರ್ತಿಸಲು ಈ ರೀತಿ ಮಾಡಲಾಗಿದೆ. ನಮ್ಮ ನಿರ್ಧಾರ ಜನರ ಮನಸ್ಸಿಗೆ ನೋವುಂಟು ಮಾಡಬೇಕೆಂಬುದಾಗಿಲ್ಲ ಎಂದು ಹೇಳಿಕೊಂಡಿದೆ. 
ದಾಳಿ ನಡೆಸಿದ್ದ ಐವರಲ್ಲಿ ಇಬ್ಬರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT