ದೇಶ

ಖ್ಯಾತ ಯಕ್ಷಗಾನ ಕಲಾವಿದ ಚಿಟ್ಟಾನಿ ರಾಮಚಂದ್ರ ಹೆಗ್ಡೆ ಆಸ್ಪತ್ರೆಗೆ ದಾಖಲು

Srinivas Rao BV
ಕಾರವಾರ: ಹಿರಿಯ ಯಕ್ಷಗಾನ ಕಲಾವಿದ ಚಿಟ್ಟಾನಿ ರಾಮಚಂದ್ರ ಹೆಗ್ಡೆ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಟ್ಟಾನಿ ರಾಮಚಂದ್ರ ಹೆಗ್ಡೆ ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಕರಾವಳಿ ಕರ್ನಾಟಕದ ಪ್ರಸಿದ್ಧ ಕಲಾವಿದರಾಗಿರುವ ರಾಮಚಂದ್ರ ಹೆಗ್ಡೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಡ್ಡೇಕೇರಿ ಗ್ರಾಮದವರಾಗಿದ್ದಾರೆ. 
ರಾಮಚಂದ್ರ ಹೆಗ್ಡೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 
SCROLL FOR NEXT