ಮೃತ ಕುಟುಂಬರ ಆಕ್ರಂದನ 
ದೇಶ

ಇರಾಕ್ ನಲ್ಲಿ 39 ಭಾರತೀಯರ ಹತ್ಯೆ: ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ

ಇರಾಕ್'ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾಗಿದ್ದ 38 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ಕರೆತಲಾಗಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಪಂಜಾಬ್ ಸರ್ಕಾರ ಸೋಮವಾರ ಘೋಷಣೆ ಮಾಡಿದೆ.

ನವದೆಹಲಿ: ಇರಾಕ್'ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾಗಿದ್ದ 38 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ಕರೆತಲಾಗಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಪಂಜಾಬ್ ಸರ್ಕಾರ ಸೋಮವಾರ ಘೋಷಣೆ ಮಾಡಿದೆ. 
ಈ ಕುರಿತಂತೆ ಹೇಳಿಕೆ ನೀಡಿರುವ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು, ಹತ್ಯೆಗೀಡಾಗಿರುವ 39 ಭಾರತೀಯರ ಪೈಕಿ 27 ಮಂದಿ ಪಂಜಾಬ್ ಮೂಲದವರಾಗಿದ್ದು, 27 ಮಂದಿಯ ಕುಂಟಬಕ್ಕೂ ರೂ.5 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. 
ಅಲ್ಲದೆ, ಪರಿಹಾರ ಜೊತೆಗೆ ಪ್ರಸ್ತುತ ನೀಡಲಾಗುತ್ತಿರುವ ರೂ.20,000 ಪಿಂಚಣಿ ಕೂಡ ಮುಂದುವರೆಯಲಿದ್ದು, ಮೃತರ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಹತ್ಯೆಗೀಡಾಗಿದ್ದ 38 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ತರುವ ಸಲುವಾಗಿ ನಿನ್ನೆಯಷ್ಟೇ ವಿದೇಶಾಂಗ ಖಾತೆಗಳ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ಮೊಸುಲ್ ಗೆ ಭೇಟಿ ನೀಡಿದ್ದರು. 
ಮೃತದೇಹಗಳ ಕಾನೂನಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ವಿ.ಕೆ. ಸಿಂಗ್ ಅವರು ಎಲ್ಲಾ 38 ಭಾರತೀಯರ ಮೃತದೇಹಗಳನ್ನು ವಿಮಾನ ಮೂಲಕ ಪಂಜಾಬ್ ರಾಜ್ಯದ ಅಮೃತಸರಕ್ಕೆ ತಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video