ಮೃತ ಕುಟುಂಬರ ಆಕ್ರಂದನ 
ದೇಶ

ಇರಾಕ್ ನಲ್ಲಿ 39 ಭಾರತೀಯರ ಹತ್ಯೆ: ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ

ಇರಾಕ್'ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾಗಿದ್ದ 38 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ಕರೆತಲಾಗಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಪಂಜಾಬ್ ಸರ್ಕಾರ ಸೋಮವಾರ ಘೋಷಣೆ ಮಾಡಿದೆ.

ನವದೆಹಲಿ: ಇರಾಕ್'ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾಗಿದ್ದ 38 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ಕರೆತಲಾಗಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಪಂಜಾಬ್ ಸರ್ಕಾರ ಸೋಮವಾರ ಘೋಷಣೆ ಮಾಡಿದೆ. 
ಈ ಕುರಿತಂತೆ ಹೇಳಿಕೆ ನೀಡಿರುವ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರು, ಹತ್ಯೆಗೀಡಾಗಿರುವ 39 ಭಾರತೀಯರ ಪೈಕಿ 27 ಮಂದಿ ಪಂಜಾಬ್ ಮೂಲದವರಾಗಿದ್ದು, 27 ಮಂದಿಯ ಕುಂಟಬಕ್ಕೂ ರೂ.5 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. 
ಅಲ್ಲದೆ, ಪರಿಹಾರ ಜೊತೆಗೆ ಪ್ರಸ್ತುತ ನೀಡಲಾಗುತ್ತಿರುವ ರೂ.20,000 ಪಿಂಚಣಿ ಕೂಡ ಮುಂದುವರೆಯಲಿದ್ದು, ಮೃತರ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಹತ್ಯೆಗೀಡಾಗಿದ್ದ 38 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ತರುವ ಸಲುವಾಗಿ ನಿನ್ನೆಯಷ್ಟೇ ವಿದೇಶಾಂಗ ಖಾತೆಗಳ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ಮೊಸುಲ್ ಗೆ ಭೇಟಿ ನೀಡಿದ್ದರು. 
ಮೃತದೇಹಗಳ ಕಾನೂನಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ವಿ.ಕೆ. ಸಿಂಗ್ ಅವರು ಎಲ್ಲಾ 38 ಭಾರತೀಯರ ಮೃತದೇಹಗಳನ್ನು ವಿಮಾನ ಮೂಲಕ ಪಂಜಾಬ್ ರಾಜ್ಯದ ಅಮೃತಸರಕ್ಕೆ ತಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT